ಬ್ರೇಕಿಂಗ್ ನ್ಯೂಸ್
24-10-23 11:53 am HK News Desk ಕರ್ನಾಟಕ
ಚಿಕ್ಕಮಗಳೂರು, ಅ 24: ಹುಲಿ ಉಗುರು ಧರಿಸಿದ ಆರೋಪದಲ್ಲಿ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಗ್ರಾಮದಲ್ಲಿ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವುದು ವರದಿಯಾಗಿದೆ.
ಸತೀಶ್, ರಂಜಿತ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆನ್ನಲಾಗಿದೆ.
ಬಂಧಿತ ಆರೋಪಿಗಳಿಬ್ಬರು ಹುಲ್ಲೇಮನೆ, ಭಾರತೀಬೈಲು ಗ್ರಾಮದವರಾಗಿದ್ದು, ಬಂಧಿತರಿಂದ ಹುಲಿ ಉಗುರಿನ ಒಂದು ಡಾಲರ್ ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಲೆ ಮರೆಸಿಕೊಂಡಿರುವ ಇಬ್ಬರ ಬಂಧನಕ್ಕೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಬಿಗ್ ಬಾಸ್' ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ರವಿವಾರ ರಾತ್ರಿ ಬಂಧಿಸಿದ್ದರು. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ವರದಿಯಾಗಿದೆ.
ಬಂಧನ ಪ್ರಕರಣದಲ್ಲಿ ಮತ್ತಿಬ್ಬರಿಗೆ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಪ್ರಕರಣದಲ್ಲಿ ಸಂತೋಷ್ ಆಪ್ತ ಹಾಗೂ ಚಿನ್ನದಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಿದೆ. ಸಂತೋಷ್ ಆಪ್ತ ರಂಜಿತ್, ಚಿನ್ನ ಅಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ತನಿಖೆಯ ಸಂದರ್ಭದಲ್ಲಿ ಸಂತೋಷ್, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅಸ್ಪಷ್ಟ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಹುಲಿ ಉಗುರು ಮೂಲ ಕೆದಕಲು ಅರಣ್ಯ ಇಲಾಖೆ ತನಿಖೆ ಮುಂದುವರಿದೆ. ಹೀಗಾಗಿ ಲಾಕೇಟ್ ಮಾಡಿಕೊಟ್ಟ ಹೊಸೂರು ಮೂಲದ ವರ್ತೂರು ಬಳಿ ಇರುವ ಚಿನ್ನದ ಅಂಗಡಿ ಮಾಲೀಕನಿಗೂ ಇದೀಗ ಸಂಕಷ್ಟ ಎದುರಾಗಿದೆ.
Bigg Boss Contestant Varthur Santhosh arrest, two arrested from chikmagaluru, notice issued to gold shop owner.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm