ಬ್ರೇಕಿಂಗ್ ನ್ಯೂಸ್
24-10-23 11:53 am HK News Desk ಕರ್ನಾಟಕ
ಚಿಕ್ಕಮಗಳೂರು, ಅ 24: ಹುಲಿ ಉಗುರು ಧರಿಸಿದ ಆರೋಪದಲ್ಲಿ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಗ್ರಾಮದಲ್ಲಿ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವುದು ವರದಿಯಾಗಿದೆ.
ಸತೀಶ್, ರಂಜಿತ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆನ್ನಲಾಗಿದೆ.
ಬಂಧಿತ ಆರೋಪಿಗಳಿಬ್ಬರು ಹುಲ್ಲೇಮನೆ, ಭಾರತೀಬೈಲು ಗ್ರಾಮದವರಾಗಿದ್ದು, ಬಂಧಿತರಿಂದ ಹುಲಿ ಉಗುರಿನ ಒಂದು ಡಾಲರ್ ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಲೆ ಮರೆಸಿಕೊಂಡಿರುವ ಇಬ್ಬರ ಬಂಧನಕ್ಕೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಬಿಗ್ ಬಾಸ್' ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ರವಿವಾರ ರಾತ್ರಿ ಬಂಧಿಸಿದ್ದರು. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ವರದಿಯಾಗಿದೆ.
ಬಂಧನ ಪ್ರಕರಣದಲ್ಲಿ ಮತ್ತಿಬ್ಬರಿಗೆ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಪ್ರಕರಣದಲ್ಲಿ ಸಂತೋಷ್ ಆಪ್ತ ಹಾಗೂ ಚಿನ್ನದಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಿದೆ. ಸಂತೋಷ್ ಆಪ್ತ ರಂಜಿತ್, ಚಿನ್ನ ಅಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ತನಿಖೆಯ ಸಂದರ್ಭದಲ್ಲಿ ಸಂತೋಷ್, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅಸ್ಪಷ್ಟ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಹುಲಿ ಉಗುರು ಮೂಲ ಕೆದಕಲು ಅರಣ್ಯ ಇಲಾಖೆ ತನಿಖೆ ಮುಂದುವರಿದೆ. ಹೀಗಾಗಿ ಲಾಕೇಟ್ ಮಾಡಿಕೊಟ್ಟ ಹೊಸೂರು ಮೂಲದ ವರ್ತೂರು ಬಳಿ ಇರುವ ಚಿನ್ನದ ಅಂಗಡಿ ಮಾಲೀಕನಿಗೂ ಇದೀಗ ಸಂಕಷ್ಟ ಎದುರಾಗಿದೆ.
Bigg Boss Contestant Varthur Santhosh arrest, two arrested from chikmagaluru, notice issued to gold shop owner.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm