ಬ್ರೇಕಿಂಗ್ ನ್ಯೂಸ್
12-11-20 01:52 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 12: ರಾಜ್ಯದಲ್ಲಿ 9ರಿಂದ 12ನೇ ತರಗತಿ ವರೆಗಿನ ಮಕ್ಕಳಿಗೆ ಡಿಸೆಂಬರ್ ತಿಂಗಳಲ್ಲಿಯೇ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ಮಾಹಿತಿ ಪ್ರಕಾರ, ಡಿಸೆಂಬರ್ 15ರಿಂದ 9ರಿಂದ 12ನೇ ತರಗತಿ ಮಕ್ಕಳ ಶಾಲೆ, ಕಾಲೇಜುಗಳು ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರಕಾರ ದೀಪಾವಳಿ ಬಳಿಕ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಈಗಾಗ್ಲೇ ಸರಣಿ ಸಭೆಗಳ ಮೂಲಕ ಖಾಸಗಿ ಶಾಲೆಗಳ ಮುಖ್ಯಸ್ಥರು ಮತ್ತು ಪೋಷಕರಿಂದ ಮಾಹಿತಿ ಸಂಗ್ರಹಿಸಿದ್ದು, ವರದಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. ಬುಧವಾರ ಆರ್ ಟಿಇ ಸ್ಟೂಡೆಂಟ್ಸ್ ಮತ್ತು ಪೇರೆಂಟ್ಸ್ ಅಸೋಸಿಯೇಶನ್ ಹಾಗೂ ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ. ಹೆಚ್ಚಿನ ಪಾಲಕರು ಮತ್ತು ಶಾಲಾ ಮುಖ್ಯಸ್ಥರು 9ರಿಂದ 12ರ ತಗತಿಗೆ ಶಾಲೆ ಆರಂಭಿಸಲು ಒಪ್ಪಿಗೆ ಸೂಚಿಸಿದ್ದಾರೆ. ಡಿ.15ರ ಬಳಿಕ ಶಾಲೆ ಆರಂಭಿಸಬಹುದು. ಆದರೆ, ಪಠ್ಯೇತರ ಚಟುವಟಿಕೆ ನಡೆಸಬಾರದು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಕೆ ಕೊರೊನಾ ಕೃಪಾಂಕ ನೀಡಬೇಕು. ವಿದ್ಯಾರ್ಥಿಗಳ ಪಾಲಕರಿಂದ ಮುಚ್ಚಳಿಕೆ ಬರೆಸಿಕೊಳ್ಳಬೇಕು ಎಂದು ಆರ್ ಟಿಇ ವಿದ್ಯಾರ್ಥಿಗಳ ಪೋಷಕರು ಒತ್ತಾಯಿಸಿದ್ದಾರೆ.


ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಬೇಕು. ಶಾಲಾರಂಭದ 15 ದಿನಗಳ ಮುಂಚಿತವಾಗೇ ಶಾಲೆಗಳನ್ನು ಶುಚಿಗೊಳಿಸಬೇಕು. ಅದರ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ಒತ್ತಾಯಿಸಿದ್ದಾರೆ. ಈ ಎಲ್ಲ ವರದಿಗಳನ್ನು ಕ್ರೋಡೀಕರಿಸಿ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಸಚಿವರಿಗೆ ಸಲ್ಲಿಸಲಿದ್ದಾರೆ. ಸದ್ಯ ಸಚಿವರು ಮತ್ತು ಶಿಕ್ಷಣ ಇಲಾಖೆ ಆಯುಕ್ತರು ಹೊರ ಜಿಲ್ಲೆಗಳಲ್ಲಿ ಪ್ರವಾಸದಲ್ಲಿದ್ದು ಕಚೇರಿಗೆ ಆಗಮಿಸಿದ ಬಳಿಕವೇ ಈ ಬಗ್ಗೆ ನಿರ್ಧರಿಸಿ ಸಿಎಂ ಯಡಿಯೂರಪ್ಪ ಮೂಲಕ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Classes 9 to 12 in Karnataka to open from December 2020 says Education Minister Office Circular. Guidelines to be issued shortly.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm