ಬ್ರೇಕಿಂಗ್ ನ್ಯೂಸ್
12-11-20 01:52 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 12: ರಾಜ್ಯದಲ್ಲಿ 9ರಿಂದ 12ನೇ ತರಗತಿ ವರೆಗಿನ ಮಕ್ಕಳಿಗೆ ಡಿಸೆಂಬರ್ ತಿಂಗಳಲ್ಲಿಯೇ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ಮಾಹಿತಿ ಪ್ರಕಾರ, ಡಿಸೆಂಬರ್ 15ರಿಂದ 9ರಿಂದ 12ನೇ ತರಗತಿ ಮಕ್ಕಳ ಶಾಲೆ, ಕಾಲೇಜುಗಳು ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರಕಾರ ದೀಪಾವಳಿ ಬಳಿಕ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಈಗಾಗ್ಲೇ ಸರಣಿ ಸಭೆಗಳ ಮೂಲಕ ಖಾಸಗಿ ಶಾಲೆಗಳ ಮುಖ್ಯಸ್ಥರು ಮತ್ತು ಪೋಷಕರಿಂದ ಮಾಹಿತಿ ಸಂಗ್ರಹಿಸಿದ್ದು, ವರದಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. ಬುಧವಾರ ಆರ್ ಟಿಇ ಸ್ಟೂಡೆಂಟ್ಸ್ ಮತ್ತು ಪೇರೆಂಟ್ಸ್ ಅಸೋಸಿಯೇಶನ್ ಹಾಗೂ ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ. ಹೆಚ್ಚಿನ ಪಾಲಕರು ಮತ್ತು ಶಾಲಾ ಮುಖ್ಯಸ್ಥರು 9ರಿಂದ 12ರ ತಗತಿಗೆ ಶಾಲೆ ಆರಂಭಿಸಲು ಒಪ್ಪಿಗೆ ಸೂಚಿಸಿದ್ದಾರೆ. ಡಿ.15ರ ಬಳಿಕ ಶಾಲೆ ಆರಂಭಿಸಬಹುದು. ಆದರೆ, ಪಠ್ಯೇತರ ಚಟುವಟಿಕೆ ನಡೆಸಬಾರದು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಕೆ ಕೊರೊನಾ ಕೃಪಾಂಕ ನೀಡಬೇಕು. ವಿದ್ಯಾರ್ಥಿಗಳ ಪಾಲಕರಿಂದ ಮುಚ್ಚಳಿಕೆ ಬರೆಸಿಕೊಳ್ಳಬೇಕು ಎಂದು ಆರ್ ಟಿಇ ವಿದ್ಯಾರ್ಥಿಗಳ ಪೋಷಕರು ಒತ್ತಾಯಿಸಿದ್ದಾರೆ.


ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಬೇಕು. ಶಾಲಾರಂಭದ 15 ದಿನಗಳ ಮುಂಚಿತವಾಗೇ ಶಾಲೆಗಳನ್ನು ಶುಚಿಗೊಳಿಸಬೇಕು. ಅದರ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ಒತ್ತಾಯಿಸಿದ್ದಾರೆ. ಈ ಎಲ್ಲ ವರದಿಗಳನ್ನು ಕ್ರೋಡೀಕರಿಸಿ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಸಚಿವರಿಗೆ ಸಲ್ಲಿಸಲಿದ್ದಾರೆ. ಸದ್ಯ ಸಚಿವರು ಮತ್ತು ಶಿಕ್ಷಣ ಇಲಾಖೆ ಆಯುಕ್ತರು ಹೊರ ಜಿಲ್ಲೆಗಳಲ್ಲಿ ಪ್ರವಾಸದಲ್ಲಿದ್ದು ಕಚೇರಿಗೆ ಆಗಮಿಸಿದ ಬಳಿಕವೇ ಈ ಬಗ್ಗೆ ನಿರ್ಧರಿಸಿ ಸಿಎಂ ಯಡಿಯೂರಪ್ಪ ಮೂಲಕ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Classes 9 to 12 in Karnataka to open from December 2020 says Education Minister Office Circular. Guidelines to be issued shortly.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm