ಬ್ರೇಕಿಂಗ್ ನ್ಯೂಸ್
12-11-20 01:52 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 12: ರಾಜ್ಯದಲ್ಲಿ 9ರಿಂದ 12ನೇ ತರಗತಿ ವರೆಗಿನ ಮಕ್ಕಳಿಗೆ ಡಿಸೆಂಬರ್ ತಿಂಗಳಲ್ಲಿಯೇ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ಮಾಹಿತಿ ಪ್ರಕಾರ, ಡಿಸೆಂಬರ್ 15ರಿಂದ 9ರಿಂದ 12ನೇ ತರಗತಿ ಮಕ್ಕಳ ಶಾಲೆ, ಕಾಲೇಜುಗಳು ಆರಂಭಗೊಳ್ಳಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರಕಾರ ದೀಪಾವಳಿ ಬಳಿಕ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳು ಈಗಾಗ್ಲೇ ಸರಣಿ ಸಭೆಗಳ ಮೂಲಕ ಖಾಸಗಿ ಶಾಲೆಗಳ ಮುಖ್ಯಸ್ಥರು ಮತ್ತು ಪೋಷಕರಿಂದ ಮಾಹಿತಿ ಸಂಗ್ರಹಿಸಿದ್ದು, ವರದಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. ಬುಧವಾರ ಆರ್ ಟಿಇ ಸ್ಟೂಡೆಂಟ್ಸ್ ಮತ್ತು ಪೇರೆಂಟ್ಸ್ ಅಸೋಸಿಯೇಶನ್ ಹಾಗೂ ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘದ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ. ಹೆಚ್ಚಿನ ಪಾಲಕರು ಮತ್ತು ಶಾಲಾ ಮುಖ್ಯಸ್ಥರು 9ರಿಂದ 12ರ ತಗತಿಗೆ ಶಾಲೆ ಆರಂಭಿಸಲು ಒಪ್ಪಿಗೆ ಸೂಚಿಸಿದ್ದಾರೆ. ಡಿ.15ರ ಬಳಿಕ ಶಾಲೆ ಆರಂಭಿಸಬಹುದು. ಆದರೆ, ಪಠ್ಯೇತರ ಚಟುವಟಿಕೆ ನಡೆಸಬಾರದು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಕೆ ಕೊರೊನಾ ಕೃಪಾಂಕ ನೀಡಬೇಕು. ವಿದ್ಯಾರ್ಥಿಗಳ ಪಾಲಕರಿಂದ ಮುಚ್ಚಳಿಕೆ ಬರೆಸಿಕೊಳ್ಳಬೇಕು ಎಂದು ಆರ್ ಟಿಇ ವಿದ್ಯಾರ್ಥಿಗಳ ಪೋಷಕರು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಬೇಕು. ಶಾಲಾರಂಭದ 15 ದಿನಗಳ ಮುಂಚಿತವಾಗೇ ಶಾಲೆಗಳನ್ನು ಶುಚಿಗೊಳಿಸಬೇಕು. ಅದರ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅನುದಾನ ರಹಿತ ಶಾಲೆಗಳ ಮುಖ್ಯಸ್ಥರು ಒತ್ತಾಯಿಸಿದ್ದಾರೆ. ಈ ಎಲ್ಲ ವರದಿಗಳನ್ನು ಕ್ರೋಡೀಕರಿಸಿ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಸಚಿವರಿಗೆ ಸಲ್ಲಿಸಲಿದ್ದಾರೆ. ಸದ್ಯ ಸಚಿವರು ಮತ್ತು ಶಿಕ್ಷಣ ಇಲಾಖೆ ಆಯುಕ್ತರು ಹೊರ ಜಿಲ್ಲೆಗಳಲ್ಲಿ ಪ್ರವಾಸದಲ್ಲಿದ್ದು ಕಚೇರಿಗೆ ಆಗಮಿಸಿದ ಬಳಿಕವೇ ಈ ಬಗ್ಗೆ ನಿರ್ಧರಿಸಿ ಸಿಎಂ ಯಡಿಯೂರಪ್ಪ ಮೂಲಕ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
Classes 9 to 12 in Karnataka to open from December 2020 says Education Minister Office Circular. Guidelines to be issued shortly.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
19-09-24 09:51 pm
HK News Desk
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
19-09-24 11:12 pm
Mangalore Correspondent
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am