ಬ್ರೇಕಿಂಗ್ ನ್ಯೂಸ್
25-10-23 06:06 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.25: ಧಾರವಾಡ ಜಿಲ್ಲೆಯ ರಾಯಾಪುರ ಬಡಾವಣೆಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ (SKDRDP) ಕಚೇರಿಯ ಲಾಕರ್ ಅನ್ನೇ ಕಳ್ಳರು ಲೂಟಿ ಮಾಡಿದ್ದು 1 ಕೋಟಿ 24 ಲಕ್ಷ ರೂ. ಹಣ ಎಗರಿಸಿದ್ದಾರೆ.
ಸಂಘದ ಕಚೇರಿಯಲ್ಲಿರುವ ಒಟ್ಟು ನಾಲ್ಕು ಲಾಕರ್ ಗಳನ್ನು ಮುರಿದಿರುವ ಕಳ್ಳರು, ಅಲ್ಲಿದ್ದ ಎಲ್ಲ ಹಣವನ್ನೂ ಬಿಡದೆ ಕದ್ದುಕೊಂಡು ಹೋಗಿದ್ದಾರೆ. ಸೆಕ್ಯೂರಿಟಿ ಗಾರ್ಡ್ಗಳು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಚೇರಿಯ ಶೌಚಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಕೃತ್ಯ ಎಸಗಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಇಲ್ಲದ ಭಾಗದಿಂದ ಬಂದು ಕಳ್ಳತನ ಮಾಡಿರೋದು ಹಲವು ಅನುಮಾನ ಮೂಡಿಸಿದೆ.
ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ ಅಡಿಯಲ್ಲಿ ಜಿಲ್ಲೆಯಾದ್ಯಂತ ನಿತ್ಯವೂ ಸಂಗ್ರಹವಾಗುತ್ತಿದ್ದ ಹಣ ಅದೇ ದಿನ ಬ್ಯಾಂಕ್ಗೆ ಡೆಪಾಸಿಟ್ ಆಗುತ್ತಿತ್ತು. ಆದರೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಅ.24ರ ಮಂಗಳವಾರ ಹಣವನ್ನು ಕಟ್ಟಲಾಗಿರಲಿಲ್ಲ. ಹೀಗಾಗಿ ಕಚೇರಿಯಲ್ಲಿನ ಲಾಕರ್ ನಲ್ಲೇ ಹಣ ಇಟ್ಟು ಹೋಗಿದ್ದರು. ಇದೆಲ್ಲ ತಿಳಿದುಕೊಂಡವರೇ ಕೃತ್ಯ ಎಸಗಿರಬಹುದು ಅಂತ ಶಂಕೆ ವ್ಯಕ್ತವಾಗಿದೆ. ಸದ್ಯ ಕಚೇರಿಯ ಸಿಬ್ಬಂದಿಯನ್ನೂ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಇಷ್ಟೊಂದು ಹಣ ಕಳ್ಳತವಾಗಿರೋದು, ಅದರಲ್ಲೂ ಖದೀಮರು ಯಾವುದೇ ಸುಳಿವು ಬಿಡದೇ ಹೋಗಿರೋದು ತನಿಖೆಗೆ ಸವಾಲಾಗಿದೆ. ಇದೇ ಕಾರಣಕ್ಕೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರೇ ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.
Theives decamped with Rs 1.24 crore in cash after breaking into four lockers at the Sri Kshetra Dharmasthala Rural Development office at Rayapur Layout in the district. The thieves gained entry by breaking a window of the office toilet while the security guards were out for lunch. There were no CCTV cameras installed, giving rise to many doubts.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm