ಬ್ರೇಕಿಂಗ್ ನ್ಯೂಸ್
25-10-23 06:06 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.25: ಧಾರವಾಡ ಜಿಲ್ಲೆಯ ರಾಯಾಪುರ ಬಡಾವಣೆಯಲ್ಲಿರುವ ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ (SKDRDP) ಕಚೇರಿಯ ಲಾಕರ್ ಅನ್ನೇ ಕಳ್ಳರು ಲೂಟಿ ಮಾಡಿದ್ದು 1 ಕೋಟಿ 24 ಲಕ್ಷ ರೂ. ಹಣ ಎಗರಿಸಿದ್ದಾರೆ.
ಸಂಘದ ಕಚೇರಿಯಲ್ಲಿರುವ ಒಟ್ಟು ನಾಲ್ಕು ಲಾಕರ್ ಗಳನ್ನು ಮುರಿದಿರುವ ಕಳ್ಳರು, ಅಲ್ಲಿದ್ದ ಎಲ್ಲ ಹಣವನ್ನೂ ಬಿಡದೆ ಕದ್ದುಕೊಂಡು ಹೋಗಿದ್ದಾರೆ. ಸೆಕ್ಯೂರಿಟಿ ಗಾರ್ಡ್ಗಳು ಊಟಕ್ಕೆ ಹೋಗಿದ್ದ ಸಮಯದಲ್ಲಿ ಕಚೇರಿಯ ಶೌಚಾಲಯದ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಕೃತ್ಯ ಎಸಗಿದ್ದಾರೆ. ಸಿಸಿ ಟಿವಿ ಕ್ಯಾಮೆರಾ ಇಲ್ಲದ ಭಾಗದಿಂದ ಬಂದು ಕಳ್ಳತನ ಮಾಡಿರೋದು ಹಲವು ಅನುಮಾನ ಮೂಡಿಸಿದೆ.
ಧರ್ಮಸ್ಥಳ ಗ್ರಾಮಾಭಿವದ್ಧಿ ಸಂಘದ ಅಡಿಯಲ್ಲಿ ಜಿಲ್ಲೆಯಾದ್ಯಂತ ನಿತ್ಯವೂ ಸಂಗ್ರಹವಾಗುತ್ತಿದ್ದ ಹಣ ಅದೇ ದಿನ ಬ್ಯಾಂಕ್ಗೆ ಡೆಪಾಸಿಟ್ ಆಗುತ್ತಿತ್ತು. ಆದರೆ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಅ.24ರ ಮಂಗಳವಾರ ಹಣವನ್ನು ಕಟ್ಟಲಾಗಿರಲಿಲ್ಲ. ಹೀಗಾಗಿ ಕಚೇರಿಯಲ್ಲಿನ ಲಾಕರ್ ನಲ್ಲೇ ಹಣ ಇಟ್ಟು ಹೋಗಿದ್ದರು. ಇದೆಲ್ಲ ತಿಳಿದುಕೊಂಡವರೇ ಕೃತ್ಯ ಎಸಗಿರಬಹುದು ಅಂತ ಶಂಕೆ ವ್ಯಕ್ತವಾಗಿದೆ. ಸದ್ಯ ಕಚೇರಿಯ ಸಿಬ್ಬಂದಿಯನ್ನೂ ಪೊಲೀಸರು ತನಿಖೆ ನಡೆಸಿದ್ದಾರೆ.
ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಇಷ್ಟೊಂದು ಹಣ ಕಳ್ಳತವಾಗಿರೋದು, ಅದರಲ್ಲೂ ಖದೀಮರು ಯಾವುದೇ ಸುಳಿವು ಬಿಡದೇ ಹೋಗಿರೋದು ತನಿಖೆಗೆ ಸವಾಲಾಗಿದೆ. ಇದೇ ಕಾರಣಕ್ಕೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತರೇ ಸ್ಥಳ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.
Theives decamped with Rs 1.24 crore in cash after breaking into four lockers at the Sri Kshetra Dharmasthala Rural Development office at Rayapur Layout in the district. The thieves gained entry by breaking a window of the office toilet while the security guards were out for lunch. There were no CCTV cameras installed, giving rise to many doubts.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm