ಬ್ರೇಕಿಂಗ್ ನ್ಯೂಸ್
25-10-23 09:34 pm Bangalore Correspondent ಕರ್ನಾಟಕ
ಬೆಂಗಳೂರು, ಅ 25: ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ ಹಲವು ಸೆಲೆಬ್ರಿಟಿಗಳಿಗೆ ಸಂಕಷ್ಟ ಎದುರಾಗಿದೆ. ಕಾರಣ ದರ್ಶನ್, ರಾಕ್ಲೈನ್ ವೆಂಕಟೇಶ್, ಜಗ್ಗೇಶ್ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಈ ಹಿಂದೆ ಹುಲಿ ಉಗುರು ಧರಿಸಿ ಫೋಟೋಗಳಿಗೆ ಪೋಸ್ ಕೊಟ್ಟಿರುವುದು.
ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಲೆಬ್ರಿಟಿಗಳ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಲವು ತಂಡಗಳನ್ನು ರಚಿಸಿ ಸೆಲೆಬ್ರಿಟಿಗಳ ಮನೆ ಮೇಲೆ ಶೋಧ ನಡೆಸುತ್ತಿದ್ದಾರೆ. ಅದರಂತೆ ಆರ್ ಆರ್ ನಗರದಲ್ಲಿರುವ ನಟ ದರ್ಶನ್ ಮನೆಯಲ್ಲಿ ಅರಣ್ಯಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಇನ್ನು ಮಲ್ಲೇಶ್ವರಂನಲ್ಲಿರುವ ನಟ ಜಗ್ಗೇಶ್, ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ನಿವಾಸದಲ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಇದೇ ವೇಳೆ, ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿರುವ ಶನೈಶ್ವರ ದೇವಸ್ಥಾನದ ಧರ್ಮದರ್ಶಿ ಧನಂಜಯ ಗುರೂಜಿ ನಿವಾಸದ ಮೇಲೂ ಅಧಿಕಾರಿಗಳು ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ. ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಅವರು ಹುಲಿ ಚರ್ಮದ ಮೇಲೆ ಕುಳಿತಿದ್ದ ಫೋಟೋ ವೈರಲ್ ಆಗಿತ್ತು. ಆ ಹಿನ್ನೆಲೆಯಲ್ಲಿ ಅವರ ಆಶ್ರಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.
Forest officers search houses of Actor Darshan, Jaggesh, Vinay guruji, rockline venkatesh over tiger claw pendant.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
28-12-25 09:37 pm
Mangalore Correspondent
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
Mangalore, Pandeshwar ASI : ಪಾಂಡೇಶ್ವರ ಠಾಣೆ ಎಎ...
28-12-25 11:50 am
ನವ ವಿಧ - ನವ ವರ್ಷ ಮಂಗಳೂರು ಕಂಬಳ ; ಒಂಬತ್ತು ಮಂದಿ...
26-12-25 10:34 pm
28-12-25 05:19 pm
HK News Desk
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm