ಬ್ರೇಕಿಂಗ್ ನ್ಯೂಸ್
26-10-23 04:37 pm Bangalore Correspondent ಕರ್ನಾಟಕ
ಬೆಂಗಳೂರು, ಅ.26: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಸಚಿವಾಲಯ ಝೆಡ್ ಕೆಟಗರಿಯ ಕೇಂದ್ರ ಮೀಸಲು ಪೊಲೀಸ್ ಪಡೆಯ ಭದ್ರತೆಯನ್ನು ನೀಡಿದೆ.
ಯಡಿಯೂರಪ್ಪ ಅವರಿಗೆ ಕರ್ನಾಟಕದಲ್ಲಿ ಮಾತ್ರ ಭದ್ರತೆ ಒದಗಿಸಲಾಗುವುದು. ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಶೀಘ್ರದಲ್ಲೇ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ಸಚಿವಾಲಯದ ಪ್ರಕಟಣೆ ಹೇಳಿದೆ. ಯಡಿಯೂರಪ್ಪ ಅವರಿಗೆ ಬೆದರಿಕೆ ಇರುವ ಬಗ್ಗೆ ವರದಿಯನ್ನು ಗುಪ್ತಚರ ಇಲಾಖೆಯಿಂದ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ಹಂಚಿಕೊಂಡಿದೆ ಎನ್ನುವ ಮಾಹಿತಿಯಿದೆ.
ಮೂಲಗಳ ಪ್ರಕಾರ, ಕರ್ನಾಟಕದ ಮೂಲಭೂತವಾದಿ ಗುಂಪುಗಳಿಂದ ಯಡಿಯೂರಪ್ಪ ಅವರಿಗೆ ಅಪಾಯವಿದೆ. ಸಿಆರ್ಪಿಎಫ್ ಕಮಾಂಡೋಗಳು ಹಿರಿಯ ಬಿಜೆಪಿ ನಾಯಕನಿಗೆ ಕರ್ನಾಟಕದಲ್ಲಿ ಇರುವಾಗ ಮತ್ತು ರಾಜ್ಯಾದ್ಯಂತ ಅವರು ಸಂಚರಿಸುವ ಸಮಯದಲ್ಲಿ ಭದ್ರತೆಯನ್ನು ಒದಗಿಸಲಿದ್ದಾರೆ.
ಇತ್ತೀಚೆಗೆ ಯಡಿಯೂರಪ್ಪ ಅವರು ಇತರ ರಾಜ್ಯ ಬಿಜೆಪಿ ನಾಯಕರೊಂದಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಘೋಷಿಸಿದ್ದರು. 2024ರ ಲೋಕಸಭೆ ಚುನಾವಣೆಗೆ ಪಕ್ಷ ಬಲಪಡಿಸಲು ಸಂಚಾರ ಕೈಗೊಳ್ಳಲಿದ್ದಾರೆ ಎನ್ನಲಾಗಿತ್ತು. ಇದರ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಬಗ್ಗೆ ಗೊಂದಲ ಎದ್ದಿದೆ. ವಿಜಯೇಂದ್ರ ಬದಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸಲಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಸಿಡಿಮಿಡಿಗೊಂಡಿದ್ದಾರೆ ಎನ್ನಲಾಗುತ್ತಿರುವ ಬಿಎಸ್ ಯಡಿಯೂರಪ್ಪ ಅವರಿಗೆ ಝೆಡ್ ಕೆಟಗರಿ ಭದ್ರತೆಯನ್ನು ನೀಡಲಾಗಿದೆ.
The Ministry of Home Affairs (MHA) has accorded Z category Central Reserve Police Force (CRPF) security cover to BJP leader and former chief minister of Karnataka BS Yediyurappa. Yediyurappa will be provided the security cover only in Karnataka and the CRPF personnel will soon take charge of the new responsibility.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm