ಬ್ರೇಕಿಂಗ್ ನ್ಯೂಸ್
26-10-23 04:37 pm Bangalore Correspondent ಕರ್ನಾಟಕ
ಬೆಂಗಳೂರು, ಅ.26: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಸಚಿವಾಲಯ ಝೆಡ್ ಕೆಟಗರಿಯ ಕೇಂದ್ರ ಮೀಸಲು ಪೊಲೀಸ್ ಪಡೆಯ ಭದ್ರತೆಯನ್ನು ನೀಡಿದೆ.
ಯಡಿಯೂರಪ್ಪ ಅವರಿಗೆ ಕರ್ನಾಟಕದಲ್ಲಿ ಮಾತ್ರ ಭದ್ರತೆ ಒದಗಿಸಲಾಗುವುದು. ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಶೀಘ್ರದಲ್ಲೇ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ಸಚಿವಾಲಯದ ಪ್ರಕಟಣೆ ಹೇಳಿದೆ. ಯಡಿಯೂರಪ್ಪ ಅವರಿಗೆ ಬೆದರಿಕೆ ಇರುವ ಬಗ್ಗೆ ವರದಿಯನ್ನು ಗುಪ್ತಚರ ಇಲಾಖೆಯಿಂದ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ಹಂಚಿಕೊಂಡಿದೆ ಎನ್ನುವ ಮಾಹಿತಿಯಿದೆ.
ಮೂಲಗಳ ಪ್ರಕಾರ, ಕರ್ನಾಟಕದ ಮೂಲಭೂತವಾದಿ ಗುಂಪುಗಳಿಂದ ಯಡಿಯೂರಪ್ಪ ಅವರಿಗೆ ಅಪಾಯವಿದೆ. ಸಿಆರ್ಪಿಎಫ್ ಕಮಾಂಡೋಗಳು ಹಿರಿಯ ಬಿಜೆಪಿ ನಾಯಕನಿಗೆ ಕರ್ನಾಟಕದಲ್ಲಿ ಇರುವಾಗ ಮತ್ತು ರಾಜ್ಯಾದ್ಯಂತ ಅವರು ಸಂಚರಿಸುವ ಸಮಯದಲ್ಲಿ ಭದ್ರತೆಯನ್ನು ಒದಗಿಸಲಿದ್ದಾರೆ.
ಇತ್ತೀಚೆಗೆ ಯಡಿಯೂರಪ್ಪ ಅವರು ಇತರ ರಾಜ್ಯ ಬಿಜೆಪಿ ನಾಯಕರೊಂದಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಘೋಷಿಸಿದ್ದರು. 2024ರ ಲೋಕಸಭೆ ಚುನಾವಣೆಗೆ ಪಕ್ಷ ಬಲಪಡಿಸಲು ಸಂಚಾರ ಕೈಗೊಳ್ಳಲಿದ್ದಾರೆ ಎನ್ನಲಾಗಿತ್ತು. ಇದರ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಬಗ್ಗೆ ಗೊಂದಲ ಎದ್ದಿದೆ. ವಿಜಯೇಂದ್ರ ಬದಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸಲಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಸಿಡಿಮಿಡಿಗೊಂಡಿದ್ದಾರೆ ಎನ್ನಲಾಗುತ್ತಿರುವ ಬಿಎಸ್ ಯಡಿಯೂರಪ್ಪ ಅವರಿಗೆ ಝೆಡ್ ಕೆಟಗರಿ ಭದ್ರತೆಯನ್ನು ನೀಡಲಾಗಿದೆ.
The Ministry of Home Affairs (MHA) has accorded Z category Central Reserve Police Force (CRPF) security cover to BJP leader and former chief minister of Karnataka BS Yediyurappa. Yediyurappa will be provided the security cover only in Karnataka and the CRPF personnel will soon take charge of the new responsibility.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm