ಬ್ರೇಕಿಂಗ್ ನ್ಯೂಸ್
28-10-23 12:38 pm Bangalore Correspondent ಕರ್ನಾಟಕ
ಬೆಂಗಳೂರು, ಅ 28: ಯಾವುದೇ ಕಾಂಗ್ರೆಸ್ ಶಾಸಕರು ಪಕ್ಷದ ಆಂತರಿಕ ವಿಚಾರಗಳ ಕುರಿತು ಹೇಳಿಕೆ ನೀಡಬಾರದು. ಇದು ಲಾಸ್ಟ್ ವಾರ್ನಿಂಗ್ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ನ ಮೂವರು ಶಾಸಕರಿಗೆ 50 ಕೋಟಿ ರೂಪಾಯಿ ಮತ್ತು ಮಂತ್ರಿ ಸ್ಥಾನದ ಆಫರ್ ನೀಡಲಾಗಿದೆ ಎಂಬ ವಿಚಾರದ ಕುರಿತು ಸದಾಶಿವನಗರದ ನಿವಾಸದ ಬಳಿ ಪ್ರತಿಕ್ರಿಯಿಸಿದ ಡಿಕೆಶಿ, ಭಾರೀ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಿದ್ದಾರೆ. ಬಹಳ ಪ್ರಯತ್ನ ಮಾಡ್ತಿದ್ದಾರೆ. ಆದರೆ, ಯಾವುದೂ ಫಲ ಕೊಡಲ್ಲ ಎಂದಿದ್ದಾರೆ.
ಪಕ್ಷದ ಆಂತರಿಕ ವಿಚಾರಗಳ ಕುರಿತು ಯಾವುದೇ ಶಾಸಕರು ಹೇಳಿಕೆ ನೀಡಬಾರದು ಎಂದು ಈ ಹಿಂದೆ ಡಿಕೆಶಿ ಎಚ್ಚರಿಕೆ ಕೊಟ್ಟಿದ್ದರು. ಆದರೆ, ಶಾಸಕರು ಅಲ್ಲಲ್ಲಿ ವಿವಿಧ ಹೇಳಿಕೆಗಳನ್ನು ಕೊಡ್ತಿದ್ದಾರೆ. ಈ ಹಿನ್ನೆಲೆ ಡಿಕೆಶಿ ಇಂದು ಮತ್ತೊಮ್ಮೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
‘ನಾನು ನಮ್ಮ ಪಕ್ಷದ ಶಾಸಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತೇನೆ, ಯಾರೂ ಕೂಡ ಪಕ್ಷದ ವಿಚಾರಗಳ ಕುರಿತು ಹೇಳಿಕೆ ಕೊಡಬೇಡಿ. ಇದನ್ನು ಮೀರಿ ಹೇಳಿಕೆ ಕೊಟ್ಟರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಆಪರೇಷನ್ ಹಸ್ತದ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಕಮಲ ತೀವ್ರಗೊಂಡಿದೆ. ಆಪರೇಷನ್ ಕಮಲದ ಹಿಂದಿನ ಗ್ಯಾಂಗ್ ಮತ್ತೆ ಸಕ್ರಿಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆರೋಪ ಮಾಡಿದ್ದರು. ನಿಮ್ಮನ್ನು ಅಮಿತ್ ಷಾ ಬಳಿ ಭೇಟಿ ಮಾಡಿಸ್ತೇವೆ. ಚಾರ್ಟರ್ ಫ್ಲೈಟ್ ಬುಕ್ ಮಾಡಿದ್ದೇವೆ ಎಂದೆಲ್ಲಾ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು.
ಎನ್. ಆರ್ ಸಂತೋಷ್ 10 ದಿನದ ಹಿಂದೆ ನನ್ನನ್ನು ಭೇಟಿ ಮಾಡಿದ್ದರು. ನಮ್ಮ ಶಾಸಕರನ್ನ ಗೋಲ್ಡ್ ಪಿಂಚ್ ಹೊಟೇಲ್ ನಲ್ಲಿ ಭೇಟಿ ಮಾಡಿದ್ರು. ಮತ್ತೊಬ್ಬರು ಮಾಜಿ ಎಂಎಲ್ ಸಿ, ಇನ್ನೊಬ್ಬರು ಬೆಳಗಾವಿ ನಾಯಕರು ಇದ್ದಾರೆ. ಸಮಯ ಬರಲಿ ಎಲ್ಲವನ್ನೂ ಬಿಚ್ಚಿಡ್ತೇವೆ ಎಂದಿದ್ದರು.
Conspiracy to topple Karnataka Congress govt won’t work by BJP says DyCM Shivakumar. Karnataka Congress MLA Ganiga Ravi on Friday alleged that attempts are on to destabilise the Congress government in the state and his colleagues are being offered Rs 50 crore and a minister portfolio.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm