ಬ್ರೇಕಿಂಗ್ ನ್ಯೂಸ್
01-11-23 12:17 pm Bangalore Correspondent ಕರ್ನಾಟಕ
ಬೆಂಗಳೂರು, ನ.01: ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ನಗರದ ಕಂಠೀರವ ಸ್ಟೇಡಿಯಂನಲ್ಲಿ ಇಂದು ಹಮ್ಮಿಕೊಂಡಿರುವ 68ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.
ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ಕ್ರೀಡಾಂಗಣದ ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಿದ್ದಾರೆ. ಸಮಾರಂಭಕ್ಕೆ ಅನೇಕ ಮಂದಿ ಆಗಮಿಸಿರುವುದರಿಂದ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದು, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ.ಶಿವಕುಮಾರ್, ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಎಂ.ಚಂದ್ರಶೇಖರ್ ಮತ್ತು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.


ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು" ಎಂದು ಹೇಳಿದ್ದಾರೆ.
Karnataka CM Siddaramaiah hoists Karnataka flag for 68th Karnataka Rajyotsava 2023.Karnataka Chief Minister Siddaramaiah on Wednesday took part in the 68th Karnataka Rajyotsava celebrations and hoisted the national flag at Kanteerava Stadium in Bengaluru.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm