ಬ್ರೇಕಿಂಗ್ ನ್ಯೂಸ್
01-11-23 12:22 pm Bangalore Correspondent ಕರ್ನಾಟಕ
ಬೆಂಗಳೂರು, ನ.01: ನಾವೆಲ್ಲರೂ ಕನ್ನಡ ಭಾಷೆಯಲ್ಲೇ ವ್ಯವಹರಿಸುತ್ತೇವೆ. ಕನ್ನಡ ಬಿಟ್ಟು ಬೇರೆ ಭಾಷೆಯಲ್ಲಿ ವ್ಯವಹರಿಸಲ್ಲ ಎಂದು ಪ್ರತಿಜ್ಞೆ ಮಾಡಬೇಕಾದ ಪರಿಸ್ಥಿತಿ ಇದೆ. ಭಾಷೆ, ನೆಲ, ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕಾಗದ್ದು ಅಗತ್ಯ. ಇದು ನನ್ನ ತಾಯಿ ನಾಡು, ಕನ್ನಡ ನನ್ನ ತಾಯಿ ಭಾಷೆ ಈ ನೆಲದಲ್ಲಿ ಹುಟ್ಟಿದ್ದೇನೆ, ಅದರ ಋಣ ತೀರಿಸಬೇಕಾದರೆ ಕನ್ನಡ ನೆಲ ಭಾಷೆ ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕಾಗ ಕೆಲಸ ಮಾಡಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕಂಠೀರವ ಮೈದಾನದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ತಮಿಳು, ಮಲಯಾಳಂ, ತೆಲುವು ಭಾಷೆ ಮಾತನಾಡಿ ಬದುಕು ನಡೆಸಬಹುದಾದ ಪರಿಸ್ಥಿತಿ ಇದೆ. ಆದರೆ ಬೇರೆ ರಾಜ್ಯಗಳಲ್ಲಿ ಈ ಪರಿಸ್ಥಿತಿ ಇಲ್ಲ ಎಂದರು.
ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರಿನ ಘೋಷಣೆ ;
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇಂದಿನಿಂದ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರನ್ನು ಕೊಡಲಾಗುವುದು ಎಂದು ಸಿಎಂ ಇದೇ ಸಂದರ್ಭದಲ್ಲಿ ಘೋಷಣೆ ಮಾಡಿದರು. ಶಿಕ್ಷಣ ಇಲಾಖೆಯ ಮನವಿಯ ಮೇರೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಘೋಷಣೆಯನ್ನು ಸಿಎಂ ಮಾಡಿದರು.
ಸರ್ಕಾರದ ಆಡಳಿತ ಕನ್ನಡ ಭಾಷೆಯಲ್ಲೇ ಆಗಬೇಕು. ಕೇಂದ್ರದ ಜೊತೆಗೆ ವ್ಯವಹರಿಸಬೇಕಾದ ಸಂದರ್ಭದಲ್ಲಿ ಇಂಗ್ಲಿಷ್ ಭಾಷೆ ಬಳಸಬೇಕು. ಆಡಳಿತ ಪರಿಣಾಮಕಾರಿಯಾಗಿ ಜನರನ್ನು ತಲುಪಬೇಕಾದರೆ ಕನ್ನಡ ಭಾಷೆಯನ್ನೇ ಬಳಸಬೇಕು. ಅಧಿಕಾರಿಗಳು ಮತ್ತು ರಾಜಕಾರಣಿಗಳು ಕನ್ನಡದಲ್ಲೇ ವ್ಯವಹರಿಸಬೇಕು ಎಂದು ಹೇಳಿದರು.
ಮೈಸೂರು ರಾಜ್ಯಕ್ಕೆ ದೇವರಾಜ್ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದರು. ಇವತ್ತಿಗೆ 50 ವರ್ಷ ತುಂಬಿದೆ. ಇದರ ಸವಿ ನೆನಪಿಗಾಗಿ ರಾಜ್ಯದಲ್ಲಿ 1 ವರ್ಷ ಕರ್ನಾಟಕ ಸಂಭ್ರಮ 50 ಎಂಬ ಹೆಸರಿನ ಮೂಲಕ ನಮ್ಮ ಸಾಹಿತ್ಯ, ಜಾನಪತ, ಕಲೆ, ಸಂಸ್ಕತಿ, ಸಂಪ್ರದಾಯವನ್ನು ಇಡೀ ವರ್ಷ ರಾಜ್ಯದ ಉದ್ದಗಲಕ್ಕೆ ತಿಳಿಸುವ ಕೆಲಸ ಮಾಡಲಿದ್ದೇವೆ ಎಂದರು. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷಾ ವಾಕ್ಯದೊಂದಿಗೆ ರಾಜ್ಯಾದ್ಯಂತ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ಹಿಂದಿನ ಸರ್ಕಾರ ಮಾಡದೆ ಇದ್ದ ಕಾರಣಕ್ಕಾಗಿ ಆಯವ್ಯಯ ಭಾಷಣದಲ್ಲಿ ಕರ್ನಾಟಕ ಸಂಭ್ರಮ ವರ್ಷ ಆಚರಣೆಯ ಘೋಷಣೆ ಮಾಡಿದ್ದೆ. ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
Speaking at the Karnataka Rajyotsava Award CM Siddaramaiah announced free power and water supply to all government schools in the state. The announcement was made during the 68th Kannada Rajyotsava celebrations held on Wednesday.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm