ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm