ಬ್ರೇಕಿಂಗ್ ನ್ಯೂಸ್
02-11-23 08:35 pm HK News Desk ಕರ್ನಾಟಕ
ಹೊಸಪೇಟೆ, ನ.2: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ಇತ್ಯಾದಿ ವಿಚಾರದಲ್ಲಿ ಯಾರು ಕೂಡ ಮಾತನಾಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ಸೂಚಿಸಿದ ಒಂದೇ ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಹೇಳಿಕೆ ನೀಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.
ವಿಜಯನಗರ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಗುರುವಾರ ಹೊಸಪೇಟೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುವಾಗ, ‘ಐದು ವರ್ಷ ನೀವೇನಾ ಸಿಎಂ’ ಎನ್ನುವ ಪ್ರಶ್ನೆಗೆ ಉತ್ತರಿಸಿ ‘ನಾನೇ ಮುಂದುವರೆಯುವೆ’ ಎಂದು ಹೇಳಿದ್ದಾರೆ. ‘ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ. ನಾನೇ ಮುಂದುವರಿಯುವೆ’ ಎಂದರು.
ಡಿಸಿಎಂ ವಿಚಾರ ತಿರ್ಮಾನ ಮಾಡುವುದು ಹೈಕಮ್ಯಾಂಡ್ಗೆ ಬಿಟ್ಟದ್ದು. ನಮ್ಮದು ರಾಷ್ಟ್ರೀಯ ಪಕ್ಷ. ಏನೆ ತೀರ್ಮಾನವಾದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ತೆಗೆದುಕೊಳ್ಳುವುದು ಎಂದರು.
ಸರ್ಕಾರ ಬೀಳುತ್ತದೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ಸೋತಿದ್ದಾರೆ. ಆತನಿಗೆ ಬೇರೆ ಕೆಲಸ ಇಲ್ಲದೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾನೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ನಾವು ಐದು ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ ಎಂದರು
ಬಿಜೆಪಿಗರು ಭ್ರಮನಿರಸನಗೊಂಡಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಮತ್ತೆ ಅಪರೇಷನ್ ಮಾಡಲು ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದು ಅವರು ತಿಳಿಸಿದರು. ಸಚಿವರಾದ ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಭೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಪಕ್ಷೇತರ ಶಾಸಕಿ ಎಂ.ಪಿ.ಲತಾ ಇತರರಿದ್ದರು.
Karnataka Chief Minister Siddaramaiah on Thursday asserted that he would hold the office for a full five years. The clarification came in the wake of speculation within a section of the ruling Congress about a change in leadership after two-and-half years of this government’s tenure.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm