ಬ್ರೇಕಿಂಗ್ ನ್ಯೂಸ್
            
                        03-11-23 06:54 pm HK News Desk ಕರ್ನಾಟಕ
            ತುಮಕೂರು, ನ.3: ಸಚಿವ ಪರಮೇಶ್ವರ್ ಅವರಿಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ.
ಪರಮೇಶ್ವರ್ ಈಗ ಹೋಮ್ ಮಿನಿಸ್ಟರ್ ಆಗಿದ್ದಾರೆ. ಮುಂದೆ ಏನು ಬೇಕಾದ್ರೂ ಆಗಬಹುದು. ಡಾಕ್ಟರೇ, ನಿಮಗೆ ಅದೃಷ್ಟಯಿದೆ. ಆಡಳಿತ ನಡೆಸುತ್ತೀರಿ ಅಂತ ಹಿಂದೊಮ್ಮೆ ಹೇಳಿದ್ದೆ. ಯಾಕಂದ್ರೆ ಅವರಿಗೆ ಅದೃಷ್ಟ ಇದೆ ಅಂತಾ ನಾನು ಭಾವಿಸಿದ್ದೇನೆ. ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗ್ತಾರೆ ಅಂದ್ರೆ ನಾವೆಲ್ಲಾ ಸಂತೋಷ ಪಡುತ್ತೇವೆ. ನಾವೆಲ್ಲಾ ಮುಖ್ಯಮಂತ್ರಿ ಆದಂತೆ ಭಾವಿಸುತ್ತೇವೆ. ಸಿದ್ದರಾಮಯ್ಯ ಇರೊವರೆಗೆ ನಾವೆಲ್ಲಾ ಸಿದ್ದರಾಮಯ್ಯ ಪರ. ನಾವು, ಪರಮೇಶ್ವರ್ ಇಬ್ಬರು ಅವರ ಪರ ಇರುತ್ತೇವೆ.
![]()

ಸಿದ್ದರಾಮಯ್ಯ ಹೊರತು ಪಡಿಸಿದ್ರೆ, ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ. ಎಐಸಿಸಿಯವರು ನಮಗೆ ಏನು ಮಾತನಾಡದಂತೆ ಹೇಳಿದ್ದಾರೆ. ಆದರೆ ಇಷ್ಟು ಮಾತ್ರ ಹೇಳುತ್ತೇನೆ. ಮುಂದೆ ಏನೂ ಹೇಳಲ್ಲ ಎಂದು ಹೇಳಿದರು. ನಾನು, ಪರಮೇಶ್ವರ್ ಒಟ್ಟಿಗೆ ಸಭೆಯಲ್ಲಿ ಕಾಣಿಸಿಕೊಂಡು ತುಂಬಾ ದಿನವಾಗಿತ್ತು. ಹಾಗಾಗಿ ನನ್ನ ಮನಸಿನ ಭಾವನೆ ಹೇಳಿದ್ದೇನೆ. ನಾನು ಯಾರಿಗೂ ಹೆದರಲ್ಲ, ಈಗ ಮಾತನಾಡಿದ್ದು ಆಗೋಯ್ತು, ಮುಂದೆ ಮಾತನಾಡಲ್ಲ ಅಂತ ಹೇಳ್ತೀವಿ. ನಾನಂತೂ ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ತುಮಕೂರಿನಲ್ಲಿ ನಡೆದ ನೂತನ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ರಾಜಣ್ಣ ಅವರ ಈ ಹೇಳಿಕೆ ವಿವಾದಕ್ಕೆ ಒಳಗಾಗುತ್ತಿದ್ದಂತೆ ಮತ್ತೆ ಸ್ಪಷ್ಟನೆ ನೀಡಿದ ರಾಜಣ್ಣ, ನಾನು ಹೇಳಿದ್ದರಲ್ಲಿ ತಪ್ಪಿಲ್ಲ. ಇರೋದನ್ನು ಹೇಳಿದ್ದೇನೆ. ಮುಂದೆ ಪರಮೇಶ್ವರ್ ಅವರೇ ಸಿಎಂ ಆಗುತ್ತಾರೆ ಎಂದು ಪುನರುಚ್ಚರಿಸಿದ್ದಾರೆ.
            
            
            Minister Parameshwara has the opportunity to become the CM. Co-operation Minister K N Rajanna has said that Parameshwara will be the chief minister after Siddaramaiah.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm