ಬ್ರೇಕಿಂಗ್ ನ್ಯೂಸ್
03-11-23 09:04 pm Bangalore Correspondent ಕರ್ನಾಟಕ
ಬೆಂಗಳೂರು, ನ.3: ಎನ್ ಡಿಎ ಜೊತೆಗಿನ ಜೆಡಿಎಸ್ ಮೈತ್ರಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚೆಯಾಗಿದ್ದು ರಾಜ್ಯ ಮಟ್ಟದಲ್ಲಿ ಚರ್ಚೆ ಜನವರಿಯಲ್ಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ಮಟ್ಟದಲ್ಲಿ ಜೆಡಿಎಸ್ ಜತೆಗೆ ಮೈತ್ರಿ ವಿಚಾರ ಚರ್ಚೆಯಾಗಿದೆ. ರಾಜ್ಯ ಮಟ್ಟದಲ್ಲಿ ಏನೆಲ್ಲಾ ವಿಷಯಗಳು ಚರ್ಚೆಯಾಗಬೇಕು ಎಂಬುದರ ಬಗ್ಗೆ ಜನವರಿಯಲ್ಲಿ ಸ್ಪಷ್ಟ ಚಿತ್ರಣ ಮೂಡಲಿದೆ ಎಂದರು.
ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಮಾಡಲಾಗುತ್ತಿದೆ ಎಂಬ ಸುದ್ದಿ ಹಬ್ಬಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಯನ್ನು ಪಕ್ಷದ ವರಿಷ್ಠರು ಸೂಕ್ತ ಸಮಯದಲ್ಲಿ ನಿರ್ಣಯ ಕೈಗೊಳ್ಳಲಿದ್ದಾರೆ. ವಿಧಾನಸಭೆ ಚುನಾವಣೆ ಮುಗಿದು ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಆಯ್ಕೆ ಮುಖ್ಯವೇ ವಿನಃ ವಿರೋಧ ಪಕ್ಷದ ನಾಯಕ ತಕ್ಷಣಕ್ಕೆ ನಡೆಯಬೇಕೆಂದೇನಿಲ್ಲ. ವಿಧಾನಸಭೆಯಲ್ಲಿರುವ ಬಿಜೆಪಿಯ 66 ಶಾಸಕರು ವಿರೋಧ ಪಕ್ಷದ ನಾಯಕನಾಗಿಯೇ ಕಾರ್ಯ ನಿರ್ವಹಿಸಿದ್ದಾರೆ ಎಂದರು.

ರಾಜ್ಯದಲ್ಲಿ ಬರದ ಛಾಯೆ ಹಾಗೂ ವಿದ್ಯುತ್ ಕ್ಷಾಮ ತಲೆದೋರಿದ್ದು ರಾಜ್ಯ ಸರ್ಕಾರ ಆಂತರಿಕ ಕಚ್ಚಾಟಕ್ಕೆ ಸಿಲುಕಿ ಜನರ ಸಮಸ್ಯೆ, ಬರದ ಸಂಕಷ್ಟ ಎರಡನ್ನೂ ಮರೆತಿದೆ. ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕರು, ಸಚಿವರು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ತತ್ ಕ್ಷಣಕ್ಕೆ ಬರ ಅಧ್ಯಯನ ತಂಡ ಕಳಿಸಿಕೊಟ್ಟಿದೆ. ರಾಜ್ಯ ಸರಕಾರ ಬರದಿಂದ ಏನೆಲ್ಲಾ ಹಾನಿಯಾಗಿದೆ, ಎಷ್ಟು ವೆಚ್ಚ ತಗಲಲಿದೆ ಎಂಬುದರ ಪ್ರಸ್ತಾವನೆಯನ್ನೇ ಇದುವರೆಗೂ ಕೇಂದ್ರಕ್ಕೆ ಸಲ್ಲಿಸಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸದಿದ್ದರೆ ಸಂಸದರು ಏನು ಮಾಡಲು ಸಾಧ್ಯವಿದೆ ಪ್ರಸ್ತಾವನೆ ನೀಡಿದರೆ ಕೇಂದ್ರದ ಮನವೊಲಿಕೆ ಕಾರ್ಯವನ್ನು ಸಂಸದರಾಗಿ ನಾವು ಮಾಡಬಹುದಾಗಿದೆ. ರಾಜ್ಯ ಸರ್ಕಾರ ಕೇಂದ್ರದ ಕಡೆ ಕೈ ತೋರಿಸುವ ಬದಲು ತನ್ನಲ್ಲಿರುವ ಅನುದಾನವನ್ನು ಬರ ಪರಿಹಾರಕ್ಕೆಂದು ಮೊದಲು ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದರು.
![]()
ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇಷ್ಟು ಬೇಗ ಜನ ವಿರೋಧಿ ಸರ್ಕಾರ ಆಗುತ್ತದೆ ಎಂದು ಯಾರೊಬ್ಬರೂ ನಿರೀಕ್ಷಿಸಿರಲಿಲ್ಲ. ಬರದ ಛಾಯೆಯಿಂದ ಸುಮಾರು 250 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರೂ ಐಟಿ ದಾಳಿಯಾದರೂ, ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೂ ಯಾವುದರ ಬಗ್ಗೆಯೂ ರಾಜ್ಯ ಸರ್ಕಾರದಿಂದ ಸ್ಪಷ್ಟ ಹೇಳಿಕೆ ಇಲ್ಲವಾಗಿದೆ. ಆಂತರಿಕ ಕಚ್ಚಾಟದಲ್ಲಿ ತೊಡಗಿರುವ ಕಾಂಗ್ರೆಸ್ ಸರಕಾರ ತಾನಾಗಿಯೇ ಪತನಗೊಳ್ಳಲಿದ್ದು, ಬಿಜೆಪಿ ಆ ಯತ್ನ ಮಾಡುವುದಿಲ್ಲ ಎಂದರು.
JDS merger with BJP, Final discussion in January says MP Nalin Kateel.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm