ಬ್ರೇಕಿಂಗ್ ನ್ಯೂಸ್
            
                        05-11-23 06:22 pm HK News Desk ಕರ್ನಾಟಕ
            ಶಿವಮೊಗ್ಗ, ನ 05 : ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್ ನಲ್ಲಿ ಎರಡು ಅನಾಮಧೇಯ ಬಾಕ್ಸ್ ಗಳು ಪತ್ತೆಯಾಗಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಎರಡು ಬಾಕ್ಸ್ ಗಳು ರೈಲು ನಿಲ್ದಾಣದ
ಪಾರ್ಕಿಂಗ್ ಏರಿಯಾದಲ್ಲಿ ಕಂಡು ಬಂದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಯಾರೂ ಹತ್ತಿರ ಹೋಗದಂತೆ ಪೊಲೀಸರು ಬ್ಯಾರಿಕೇಡ್ ಇಟ್ಟು ನಿಗಾ ವಹಿಸಿದ್ದಾರೆ.


ಎರಡು ಬಾಕ್ಸ್ ಗಳಲ್ಲಿ ಏನಿದೆ ಎಂಬುದು ಇನ್ನು ತಿಳಿದು ಬಂದಿಲ್ಲ ಆದರೆ ಬಾಕ್ಸ್ ಮೇಲೆ ಫುಡ್ ಗ್ರೈನ್ಸ್ ಅಂಡ್ ಶುಗರ್ಸ್ ಎಂದು ಬರೆದಿದ್ದು ಯಾರಿಗೆ ಸೇರಿದ್ದು ಎಂದು ಇನ್ನೂ ತಿಳಿದು ಬಂದಿಲ್ಲವಾಗಿದೆ.

ಅನಾಮಧೇಯ ಬಾಕ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದ್ದು ಅಲ್ಲದೆ ಬಾಕ್ಸ್ ಪರಿಶೀಲನೆಗೆ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಸ್ಥಳಕ್ಕೆ ದೌಡಾಯಿಸಿದೆ.
ಸದ್ಯ ಪೊಲೀಸರು ಬಾಕ್ಸ್ಗಳು ದೊರೆತಿರುವ ಸುಮಾರು 200 ಮೀಟರ್ನಷ್ಟು ದೂರದವರೆಗೆ ಎರಡೂ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರ ಸಂಚಾರ ಬಂದ್ ಮಾಡಿದ್ದಾರೆ. ಸಂಚಾರಿ ಪೊಲೀಸರು ವಾಹನ ಸಂಚಾರಕ್ಕೆ ಬೇರೆ ಮಾರ್ಗದಲ್ಲಿ ಅನುಕೂಲ ಮಾಡಿಕೊಟ್ಟಿದ್ದಾರೆ. ಬಾಕ್ಸ್ ಬಗ್ಗೆ ಅನುಮಾನ ಹೆಚ್ಚಾಗಿರುವ ಕಾರಣ ಅದರಲ್ಲಿರುವ ವಸ್ತು ಏನೆಂಬುದನ್ನು ಪತ್ತೆ ಹಚ್ಚಲು ಬೆಂಗಳೂರಿನಿಂದ ವಿಶೇಷ ತಂಡ ಕರೆಯಿಸಲಾಗುತ್ತಿದೆ.
ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ:
ಬಾಕ್ಸ್ ಪತ್ತೆಯಾದ ಸ್ಥಳಕ್ಕೆ ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಬಾಕ್ಸ್ ಸುತ್ತಲೂ ಪೊಲೀಸರು ಮರಳಿನ ಚೀಲ ಹಾಕಿದ್ದಾರೆ.
            
            
            2 suspicious boxes found at parking lot of Shivamogga Railway station, bomb squad arrives at spot. Police have deployed heavy security over the railway station area.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm