ಬ್ರೇಕಿಂಗ್ ನ್ಯೂಸ್
07-11-23 05:54 pm HK News Desk ಕರ್ನಾಟಕ
ಶಿವಮೊಗ್ಗ, ನ.7: ರೈಲ್ವೇ ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಕ್ಸ್ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಇಬ್ಬರು ಖದೀಮರು ವ್ಯಕ್ತಿಯೊಬ್ಬರಿಗೆ ಹಣ ಕೊಡಿಸುತ್ತೇವೆಂದು ನಂಬಿಸಿ ಮಾಡಿದ ಕೃತ್ಯ ಇದೆಂದು ತನಿಖೆಯಲ್ಲಿ ತಿಳಿದುಬಂದಿದೆ. ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಎರಡು ದಿನಗಳ ಹಿಂದೆ ರೈಲ್ವೇ ನಿಲ್ದಾಣದಲ್ಲಿ ಎರಡು ಬಾಕ್ಸ್ ಪತ್ತೆಯಾಗಿತ್ತು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಜಬೀವುಲ್ಲ ಹಾಗೂ ಸಮೀವುಲ್ಲಾ ಅಲಿಯಾಸ್ ಬಾಬಾ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಇವರಿಬ್ಬರು ಕಡಿಮೆ ಬಡ್ಡಿದರದಲ್ಲಿ ಹಣ ಕೊಡಿಸುತ್ತೇವೆಂದು ನಂಬಿಸಿ ವಂಚನೆ ಮಾಡುತ್ತಿದ್ದರು ಎಂದಿದ್ದಾರೆ.

ಜಬೀವುಲ್ಲಾ ಮತ್ತು ಬಾಬಾ ಗೋವಾದ ರಾಜೇಶ್ ಜಾಧವ್ ಮತ್ತು ತಿಪಟೂರಿನ ಗಿರೀಶ್ ಎಂಬವರಿಗೆ ಅರ್ಧ ಪರ್ಸೆಂಟ್ ಬಡ್ಡಿಗೆ ದುಡ್ಡು ಕೊಡಿಸುವುದಾಗಿ ನಂಬಿಸಿದ್ದರು. ವಂಚಿತರಿಂದ ಖಾಲಿ ಚೆಕ್ ಗಳನ್ನು ಪಡೆದಿದ್ದು ಆರೋಪಿಗಳು ಎರಡು ಪೆಟ್ಟಿಗೆಯಲ್ಲಿ ಒಂದೊಂದು ಕೋಟಿ ಹಣ ಇರಿಸಿದ್ದಾಗಿ ಹೇಳಿದ್ದರು. ಗೋವಾಕ್ಕೆ ನಾವು ಬರಲು ಕಷ್ಟವಾಗುತ್ತದೆ, ನೀವೇ ಶಿವಮೊಗ್ಗಕ್ಕೆ ಬನ್ನಿ ಎಂದು ರಾಜೇಶ್ ಜಾಧವ್ ನನ್ನು ಕರೆಸಿದ್ದರು. ಗಿರೀಶ್ ಹಾಗೂ ರಾಜೇಶ್ ಜಾಧವ್ ಶಿವಮೊಗ್ಗ ರೈಲು ನಿಲ್ದಾಣಕ್ಕೆ ಬರುವುದು ತಡವಾಗಿದಕ್ಕೆ ಬಾಕ್ಸ್ ಅಲ್ಲಿಯೇ ಇಟ್ಟು ಹೋಗಿದ್ದಾರೆ. ಆದರೆ ಬಾಕ್ಸ್ ಹೊರಗಡೆ ಮೇಡ್ ಇನ್ ಬಾಂಗ್ಲಾದೇಶ ಎಂದು ಬರೆದಿದ್ದು ಅನುಮಾನಕ್ಕೆ ಕಾರಣವಾಗಿತ್ತು.
ತನಿಖೆಯಲ್ಲಿ ಸ್ಟೀಲ್ ಬಾಕ್ಸ್ ನಲ್ಲಿ ಉಪ್ಪು ಹಾಕಿಟ್ಟಿರುವುದು ಪತ್ತೆಯಾಗಿತ್ತು. ಒಳಗಡೆ ಕಾಗದ ಪತ್ರಗಳಲ್ಲಿ ಉಪ್ಪು ಹುಡಿ ಹಾಕಿಟ್ಟು ಎರಡು ಕೋಟಿ ಹಣ ಇದೆ ಎಂದು ನಂಬಿಸಿದ್ದರು. ಪ್ರಕರಣದಲ್ಲಿ ಬಾಬಾ ಎ1 ಆರೋಪಿ ಆಗಿದ್ದಾನೆ. 2021ರಲ್ಲಿ ಇವರು ತಿಪಟೂರಿನಲ್ಲಿ ಡಾಕ್ಟರ್ ಒಬ್ಬರಿಗೆ ಇದೇ ರೀತಿ ಮೋಸ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ಮಿಥುನ್ ಮಾಹಿತಿ ನೀಡಿದ್ದಾರೆ.
Shivamogga bomb scare, new big twist shared by SP. police said that the act was carried out by two miscreants on the pretext of giving money to a man. two anonymous boxes triggered a bomb scare here and the bomb disposal squad was pressed into action. However, the boxes were found to have contained salt and other waste materials.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm