ಬ್ರೇಕಿಂಗ್ ನ್ಯೂಸ್
08-11-23 12:00 pm HK News Desk ಕರ್ನಾಟಕ
ತುಮಕೂರು, ನ.8: ಚಿರತೆ ದಾಳಿಗೆ ಸಿಲುಕಿದ ಮಗಳನ್ನು ತಂದೆ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಲೇಖನ (7) ಚಿರತೆ ದಾಳಿಯಿಂದ ಪಾರಾದ ಬಾಲಕಿ. ಬಾಲಕಿ ಮೇಲೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸುತ್ತಿದ್ದಂತೆ, ತಂದೆ ರಾಕೇಶ್ ಬೆದರಿಸಿ ಓಡಿಸಿದ್ದಾರೆ.
ಸಂಜೆಯ ವೇಳೆ ರಾಕೇಶ್ ಮತ್ತು ಹರ್ಷಿತಾ ದಂಪತಿಯ ಮಗಳು ಲೇಖನ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಿಢೀರ್ ಮೈಮೇಲೆರಗಿದೆ. ಸ್ಥಳದಲ್ಲೇ ಇದ್ದ ರಾಕೇಶ್ ಜೋರಾಗಿ ಕೂಗಿದ್ದು, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಮಗುವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದೆ.
ಬಾಲಕಿಯ ಕಾಲಿಗೆ ಪರಚಿದ ಗಾಯಗಳಾಗಿದ್ದು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು:
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದರೊಂದಿಗೆ ಜನವಸತಿ ಪ್ರದೇಶಗಳಲ್ಲಿ ಚಿರತೆ, ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರು ಹೊರವಲಯದ ಕೆಲವೆಡೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಚಿರತೆ, ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಗುಂಡೇಟಿಗೆ ಬಲಿಯಾಗಿತ್ತು. ಚಿರತೆಯನ್ನು ಬೊಮ್ಮನಹಳ್ಳಿಯ ಕುಡ್ಲುಗೇಟ್ ಬಳಿ ಸೆರೆ ಹಿಡಿಯಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಗುಂಡು ತಗುಲಿದ್ದರಿಂದ ಮೃತಪಟ್ಟಿತ್ತು.
Leopard attacks seven year old play outside house at Tumakuru. She has undergoing treatment at hospital.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm