ಬ್ರೇಕಿಂಗ್ ನ್ಯೂಸ್
09-11-23 12:51 pm HK News Desk ಕರ್ನಾಟಕ
ಹಾಸನ, ನ.9: ಪಕ್ಷದ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನೇಮಕ ವಿಳಂಬ ಆಗಿರುವುದು ಪಕ್ಷದ ನಾಯಕರಿಗೆ ಮುಜುಗರ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಸದಾನಂದ ಗೌಡ ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸ್ಥಾನಗಳಿಗೆ ನೇಮಕಾತಿ ವಿಳಂಬ ಆಗುತ್ತಿರುವುದಕ್ಕೆ ನಾವು ವಿಷಾದಿಸುತ್ತೇವೆ. ನಾವು ಆ ತಪ್ಪನ್ನು ಒಪ್ಪಿಕೊಳ್ಳುತ್ತೇವೆ. ಇದರಿಂದ ನಮಗೆ ಮುಜುಗರವನ್ನು ಉಂಟುಮಾಡಿದೆ. ನಮ್ಮ ನಾಯಕರು ಈ ವಿಷಯದ ಬಗ್ಗೆ ವೈಯಕ್ತಿಕ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಐದು ರಾಜ್ಯಗಳ ಚುನಾವಣೆಗಳು ಮುಗಿದ ನಂತರ, ಘೋಷಣೆ ಮಾಡಬಹುದೆಂದು ನಿರೀಕ್ಷಿಸುತ್ತೇವೆ ಎಂದವರು ಹೇಳಿದ್ದಾರೆ.
ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರ ಸಂಬಂಧಿಸಿದಂತೆ ನಮ್ಮ ಕೇಂದ್ರ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ. ಆದರೆ, ನಮ್ಮ ಕಾರ್ಯಕರ್ತರು ಇದಕ್ಕೆ ಸಮ್ಮತಿ ಸೂಚಿಸಿಲ್ಲ. ಇಷ್ಟು ವರ್ಷ ವಿರೋಧಿಸಿಕೊಂಡು ಬಂದಿರುವ ಪಕ್ಷದೊಂದಿಗೆ ಏಕಾಏಕಿ ಮೈತ್ರಿ ಮಾಡಿಕೊಳ್ಳುವುದು ಸರಿಯಲ್ಲವೆಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸುವುದು ಕಷ್ಟವಾಗುತ್ತದೆ. ರಾಜ್ಯದಲ್ಲಿ ಇದನ್ನು ಜಾರಿಗೆ ತರಲು ಸೂಕ್ತ ಮಾರ್ಗಸೂಚಿಗಳನ್ನು ನೀಡುವಂತೆ ನಾವು ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇವೆ ಎಂದು ಸದಾನಂದಗೌಡ ಹೇಳಿದ್ದಾರೆ.
ಇದೇ ವೇಳೆ, ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ರಾಜ್ಯದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ. ಹೀಗಿರುವಾಗ ಮತ್ತಷ್ಟು ಕೇಳುವುದು ಸ್ವಾರ್ಥ ಆಗುತ್ತದೆ ಎಂದು ಡಿವಿಎಸ್ ಹೇಳಿದ್ದಾರೆ.
Bengaluru North Member of Parliament DV Sadananda Gowda on Wednesday said that the appointment of the Leader of Opposition and the Bharatiya Janata Party state president is delayed owing to alleged differences among a few senior leaders of the party.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm