ಬ್ರೇಕಿಂಗ್ ನ್ಯೂಸ್
09-11-23 12:51 pm HK News Desk ಕರ್ನಾಟಕ
ಹಾಸನ, ನ.9: ಪಕ್ಷದ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನೇಮಕ ವಿಳಂಬ ಆಗಿರುವುದು ಪಕ್ಷದ ನಾಯಕರಿಗೆ ಮುಜುಗರ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಸದಾನಂದ ಗೌಡ ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸ್ಥಾನಗಳಿಗೆ ನೇಮಕಾತಿ ವಿಳಂಬ ಆಗುತ್ತಿರುವುದಕ್ಕೆ ನಾವು ವಿಷಾದಿಸುತ್ತೇವೆ. ನಾವು ಆ ತಪ್ಪನ್ನು ಒಪ್ಪಿಕೊಳ್ಳುತ್ತೇವೆ. ಇದರಿಂದ ನಮಗೆ ಮುಜುಗರವನ್ನು ಉಂಟುಮಾಡಿದೆ. ನಮ್ಮ ನಾಯಕರು ಈ ವಿಷಯದ ಬಗ್ಗೆ ವೈಯಕ್ತಿಕ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಐದು ರಾಜ್ಯಗಳ ಚುನಾವಣೆಗಳು ಮುಗಿದ ನಂತರ, ಘೋಷಣೆ ಮಾಡಬಹುದೆಂದು ನಿರೀಕ್ಷಿಸುತ್ತೇವೆ ಎಂದವರು ಹೇಳಿದ್ದಾರೆ.
ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರ ಸಂಬಂಧಿಸಿದಂತೆ ನಮ್ಮ ಕೇಂದ್ರ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ. ಆದರೆ, ನಮ್ಮ ಕಾರ್ಯಕರ್ತರು ಇದಕ್ಕೆ ಸಮ್ಮತಿ ಸೂಚಿಸಿಲ್ಲ. ಇಷ್ಟು ವರ್ಷ ವಿರೋಧಿಸಿಕೊಂಡು ಬಂದಿರುವ ಪಕ್ಷದೊಂದಿಗೆ ಏಕಾಏಕಿ ಮೈತ್ರಿ ಮಾಡಿಕೊಳ್ಳುವುದು ಸರಿಯಲ್ಲವೆಂದು ಕಾರ್ಯಕರ್ತರು ಹೇಳುತ್ತಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧಿಸುವುದು ಕಷ್ಟವಾಗುತ್ತದೆ. ರಾಜ್ಯದಲ್ಲಿ ಇದನ್ನು ಜಾರಿಗೆ ತರಲು ಸೂಕ್ತ ಮಾರ್ಗಸೂಚಿಗಳನ್ನು ನೀಡುವಂತೆ ನಾವು ಕೇಂದ್ರ ನಾಯಕರಿಗೆ ಮನವಿ ಮಾಡಿದ್ದೇವೆ ಎಂದು ಸದಾನಂದಗೌಡ ಹೇಳಿದ್ದಾರೆ.
ಇದೇ ವೇಳೆ, ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ರಾಜ್ಯದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ. ಹೀಗಿರುವಾಗ ಮತ್ತಷ್ಟು ಕೇಳುವುದು ಸ್ವಾರ್ಥ ಆಗುತ್ತದೆ ಎಂದು ಡಿವಿಎಸ್ ಹೇಳಿದ್ದಾರೆ.
Bengaluru North Member of Parliament DV Sadananda Gowda on Wednesday said that the appointment of the Leader of Opposition and the Bharatiya Janata Party state president is delayed owing to alleged differences among a few senior leaders of the party.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm