ಬ್ರೇಕಿಂಗ್ ನ್ಯೂಸ್
11-11-23 07:00 pm HK News Desk ಕರ್ನಾಟಕ
ಮಂಜೇಶ್ವರ, ನ.11: ಕರ್ನಾಟಕ ಗಡಿಭಾಗ ತಲಪಾಡಿಯಿಂದ ಕೇರಳದ ಕಾಸರಗೋಡಿನಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭರದಿಂದ ನಡೆಯುತ್ತಿದೆ. ಇದೇ ವೇಳೆ, ತಲಪಾಡಿ, ಮಂಜೇಶ್ವರ ಭಾಗದಲ್ಲಿ ಬಹುತೇಕ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿದ್ದು ಹೊಸ ರಸ್ತೆಯಲ್ಲಿ ಬಸ್ಸು, ಇನ್ನಿತರ ವಾಹನಗಳು ಓಡಾಟ ಆರಂಭಿಸಿವೆ. ಆದರೆ ಇಲ್ಲೊಬ್ಬರು ಹೆದ್ದಾರಿಯಲ್ಲಿ ಸಾಗುತ್ತಿದ್ದ ಬಸ್ಸಿಗೆ ಅಡ್ಡಲಾಗಿ ಕುಳಿತು ಬಸ್ಸನ್ನೇ ಹಿಂದಕ್ಕೆ ಕಳಿಸಿರುವ ಪ್ರಸಂಗದ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹೊಸ ಹೆದ್ದಾರಿಯ ಮಧ್ಯದಲ್ಲೇ ಸಾಗುತ್ತಿತ್ತು. ಬಸ್ ಇಕ್ಕೆಲದಲ್ಲಿ ನಿರ್ಮಿಸಿರುವ ಸರ್ವಿಸ್ ರಸ್ತೆಯಲ್ಲಿ ಸಾಗದೇ ಇದ್ದರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಹೀಗಾಗಿ ಕುಂಜತ್ತೂರಿನ ಉದ್ಯಮಿ ಹಸೈನಾರ್ ಎಂಬವರು ರಸ್ತೆ ಮಧ್ಯೆ ಸ್ಟೂಲ್ ಇಟ್ಟು ಕುಳಿತು ಬಸ್ಸನ್ನೇ ಹಿಂದಕ್ಕೆ ಕಳಿಸಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಸಿನಿಮೀಯ ಶೈಲಿಯಲ್ಲಿ ಆ ವ್ಯಕ್ತಿ ಕುರ್ಚಿಯಿಂದ ಎದ್ದು ಬಸ್ಸಿನ ಎದುರಿನಲ್ಲಿ ನಡೆದು ಸಾಗುವ ವಿಡಿಯೋ ಜನಮೆಚ್ಚುಗೆ ಗಳಿಸಿದೆ.




ತಲಪಾಡಿಯಿಂದ ಕಾಸರಗೋಡು- ಕಣ್ಣೂರಿನ ವರೆಗೆ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಲ್ಲಿ ನಡುವೆ ಸಾಗುವ ವಾಹನಗಳಿಗೆ ಯಾವುದೇ ಅಡೆತಡೆಗಳಿಲ್ಲದೆ ಸಾಗುವಂತೆ ಪ್ರತ್ಯೇಕ ರಸ್ತೆಯನ್ನು ಮಾಡಲಾಗಿದೆ. ಇದರಿಂದಾಗಿ ಸ್ಥಳೀಯ ಪ್ರಯಾಣಿಕರು, ಜನಸಾಮಾನ್ಯರು ಹೆದ್ದಾರಿಯನ್ನು ಆಚೀಚೆ ದಾಟುವುದಕ್ಕೂ ಆಗಲ್ಲ. ಒಂದೆಡೆ ಸ್ಥಳೀಯರಿಗೆ ಸಮಸ್ಯೆ ಆಗುತ್ತಿದ್ದರೂ, ನೇರವಾಗಿ ಸಾಗುವ ವಾಹನ ಪ್ರಯಾಣಿಕರಿಗೆ ಯಾವುದೇ ಕಿರಿಕಿರಿ ಇಲ್ಲದೆ ಸಾಗಬಹುದಾಗಿದೆ. ಸ್ಥಳೀಯ ವಾಹನಗಳು, ಸಾರಿಗೆ ಬಸ್ ಗಳು ಸಾಗುವುದಕ್ಕೆ ಸರ್ವಿಸ್ ರಸ್ತೆಯನ್ನು ಮಾಡಲಾಗಿದೆ. ಆದರೆ ಕೆಲವೊಮ್ಮೆ ನೇರ ರಸ್ತೆಯಲ್ಲೇ ಬಸ್ಸುಗಳು ಸಾಗುವುದರಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಈ ರೀತಿ ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ.
Kasargod man sits on chair in the middle of National Highway between Mangalore and kerala.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm