ಬ್ರೇಕಿಂಗ್ ನ್ಯೂಸ್
11-11-23 07:00 pm HK News Desk ಕರ್ನಾಟಕ
ಮಂಜೇಶ್ವರ, ನ.11: ಕರ್ನಾಟಕ ಗಡಿಭಾಗ ತಲಪಾಡಿಯಿಂದ ಕೇರಳದ ಕಾಸರಗೋಡಿನಲ್ಲಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭರದಿಂದ ನಡೆಯುತ್ತಿದೆ. ಇದೇ ವೇಳೆ, ತಲಪಾಡಿ, ಮಂಜೇಶ್ವರ ಭಾಗದಲ್ಲಿ ಬಹುತೇಕ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿದ್ದು ಹೊಸ ರಸ್ತೆಯಲ್ಲಿ ಬಸ್ಸು, ಇನ್ನಿತರ ವಾಹನಗಳು ಓಡಾಟ ಆರಂಭಿಸಿವೆ. ಆದರೆ ಇಲ್ಲೊಬ್ಬರು ಹೆದ್ದಾರಿಯಲ್ಲಿ ಸಾಗುತ್ತಿದ್ದ ಬಸ್ಸಿಗೆ ಅಡ್ಡಲಾಗಿ ಕುಳಿತು ಬಸ್ಸನ್ನೇ ಹಿಂದಕ್ಕೆ ಕಳಿಸಿರುವ ಪ್ರಸಂಗದ ವಿಡಿಯೋ ವೈರಲ್ ಆಗಿದೆ.
ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹೊಸ ಹೆದ್ದಾರಿಯ ಮಧ್ಯದಲ್ಲೇ ಸಾಗುತ್ತಿತ್ತು. ಬಸ್ ಇಕ್ಕೆಲದಲ್ಲಿ ನಿರ್ಮಿಸಿರುವ ಸರ್ವಿಸ್ ರಸ್ತೆಯಲ್ಲಿ ಸಾಗದೇ ಇದ್ದರೆ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಹೀಗಾಗಿ ಕುಂಜತ್ತೂರಿನ ಉದ್ಯಮಿ ಹಸೈನಾರ್ ಎಂಬವರು ರಸ್ತೆ ಮಧ್ಯೆ ಸ್ಟೂಲ್ ಇಟ್ಟು ಕುಳಿತು ಬಸ್ಸನ್ನೇ ಹಿಂದಕ್ಕೆ ಕಳಿಸಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಸಿನಿಮೀಯ ಶೈಲಿಯಲ್ಲಿ ಆ ವ್ಯಕ್ತಿ ಕುರ್ಚಿಯಿಂದ ಎದ್ದು ಬಸ್ಸಿನ ಎದುರಿನಲ್ಲಿ ನಡೆದು ಸಾಗುವ ವಿಡಿಯೋ ಜನಮೆಚ್ಚುಗೆ ಗಳಿಸಿದೆ.




ತಲಪಾಡಿಯಿಂದ ಕಾಸರಗೋಡು- ಕಣ್ಣೂರಿನ ವರೆಗೆ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಲ್ಲಿ ನಡುವೆ ಸಾಗುವ ವಾಹನಗಳಿಗೆ ಯಾವುದೇ ಅಡೆತಡೆಗಳಿಲ್ಲದೆ ಸಾಗುವಂತೆ ಪ್ರತ್ಯೇಕ ರಸ್ತೆಯನ್ನು ಮಾಡಲಾಗಿದೆ. ಇದರಿಂದಾಗಿ ಸ್ಥಳೀಯ ಪ್ರಯಾಣಿಕರು, ಜನಸಾಮಾನ್ಯರು ಹೆದ್ದಾರಿಯನ್ನು ಆಚೀಚೆ ದಾಟುವುದಕ್ಕೂ ಆಗಲ್ಲ. ಒಂದೆಡೆ ಸ್ಥಳೀಯರಿಗೆ ಸಮಸ್ಯೆ ಆಗುತ್ತಿದ್ದರೂ, ನೇರವಾಗಿ ಸಾಗುವ ವಾಹನ ಪ್ರಯಾಣಿಕರಿಗೆ ಯಾವುದೇ ಕಿರಿಕಿರಿ ಇಲ್ಲದೆ ಸಾಗಬಹುದಾಗಿದೆ. ಸ್ಥಳೀಯ ವಾಹನಗಳು, ಸಾರಿಗೆ ಬಸ್ ಗಳು ಸಾಗುವುದಕ್ಕೆ ಸರ್ವಿಸ್ ರಸ್ತೆಯನ್ನು ಮಾಡಲಾಗಿದೆ. ಆದರೆ ಕೆಲವೊಮ್ಮೆ ನೇರ ರಸ್ತೆಯಲ್ಲೇ ಬಸ್ಸುಗಳು ಸಾಗುವುದರಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತಿದ್ದುದನ್ನು ಗಮನಿಸಿದ ಸ್ಥಳೀಯರು ಈ ರೀತಿ ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ.
Kasargod man sits on chair in the middle of National Highway between Mangalore and kerala.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm