ಬ್ರೇಕಿಂಗ್ ನ್ಯೂಸ್
12-11-23 02:48 pm Bangalore Correspondent ಕರ್ನಾಟಕ
ಬೆಂಗಳೂರು, ನ.12: ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಸೀಸನ್ 10 ಶುರುವಾಗಿ ಒಂದು ತಿಂಗಳು ಮೇಲಾಗಿದೆ. ಮನೆಯಲ್ಲಿ ಸ್ನೇಹಿತರಾಗಿ, ತಂಡವಾಗಿ ಆಡುತ್ತಿದ್ದವರು ನಿಧಾನವಾಗಿ ತನ್ನ ಆಟದ ಗೇರ್ ಬದಲಾಯಿಸಿ ವೈಯಕ್ತಿಕ ಗೆಲುವಿನ ದಡ ದಾಟುವ ಹಂತ ಬಂದಿದೆ.
ಈ ನಡುವೆ ಈ ವಾರ ದೊಡ್ಮನೆಯಿಂದ ಆಚೆಬರುವ ಸ್ಪರ್ಧಿ ಯಾರೆನ್ನುವ ಕುತೂಹಲ ಮೂಡಿದೆ. ಈ ವಾರ ಕಿಚ್ಚನ ಚಪ್ಪಾಳೆಯನ್ನು ಪ್ರತಾಪ್ ಗಳಿಸಿಕೊಂಡಿದ್ದಾರೆ. ಇದರ ಜೊತೆ ಮನೆಯ ಸರಿ ತಪ್ಪುಗಳ ಕಿಚ್ಚ ಮಾತನಾಡಿದ್ದಾರೆ.
ಈ ವಾರ ಭಾಗ್ಯಶ್ರೀ, ಸಂಗೀತಾ, ತನಿಷಾ, ಕಾರ್ತಿಕ್, ತುಕಾಲಿ, ನಮ್ರತಾ, ಇಶಾನಿ, ಸ್ನೇಹಿತ್, ನೀತು, ವರ್ತೂರು ಸಂತೋಷ್ ನಾಮಿನೇಟ್ ಆಗಿದ್ದರು. ಇವರಲ್ಲಿ ಪ್ರತಾಪ್ ಟಾಸ್ಕ್ ನಲ್ಲಿ ಗೆದ್ದು ಸಿಕ್ಕ ಪವರ್ ನಿಂದ ಭಾಗ್ಯಶ್ರೀ, ಸಂಗೀತಾ ಹಾಗೂ ತನಿಷಾ ಉಳಿಸಿದ್ದಾರೆ. ಇನ್ನು ನಮ್ರತಾ, ಕಾರ್ತಿಕ್, ತುಕಾಲಿ ಸಂತೂ ಅವರು ಎಲಿಮಿನೇಷನ್ ನಿಂದ ಪಾರಾರಾಗಿದ್ದಾರೆ ಎಂದು ಕಿಚ್ಚ ಹೇಳಿದ್ದಾರೆ
ವರ್ತೂರು ಸಂತೋಷ್ ಹೇಳಿದ್ದೇನು?
"ಹೊರಗಡೆ ಒಂದು ಘಟನೆ ನಡೆಯಿತು. ಅದನ್ನು ಮರೆತು ಇಲ್ಲಿ ಆಡಬೇಕು ಅಂದರು. ನನಗೆ ಆಗ್ತಾ ಇಲ್ಲ. ನಾನು ಹೊರಗಡೆ ಹೋಗಬೇಕು" ಎಂದು ವರ್ತೂರು ಸಂತೋಷ್ ಹೇಳಿದ್ದಾರೆ.
ಕಿಚ್ಚ ಸುದೀಪ್ ಹೇಳಿದ್ದೇನು?
ಆಗ ಕಿಚ್ಚ ಸುದೀಪ್ ಅವರು 35 ಲಕ್ಷ ಮತಗಳು ಬಂದಿವೆ. ಆ ಜನರ ವಿರುದ್ಧವಾಗಿ ನಾನು ಹೋಗೋಕೆ ಆಗಲ್ಲ, ಹೋಗೋದಿಲ್ಲ, ನನಗೆ ಬೇಸರವಾಗಿದೆ" ಎಂದು ಹೇಳಿದ್ದಾರೆ.
ಮನಸ್ಸು ಬದಲಾಯಿಸ್ತಾರಾ ಸಂತೋಷ್?
ವರ್ತೂರು ಸಂತೋಷ್ ಅವರು ಬಿಗ್ ಬಾಸ್ ಮನೆಯ ಗೇಟ್ ಬಳಿ ಬಂದಿದ್ದು, ಸಂಗೀತಾ ಅವರು, "ಮತ್ತೆ ಈ ಅವಕಾಶ ಸಿಗೋದಿಲ್ಲ" ಎಂದು ಹೇಳಿದ್ದಾರೆ. ಹೀಗಿದ್ದರೂ ಕೂಡ ವರ್ತೂರು ಅವರು ಯಾರ ಮಾತನ್ನೂ ಕೇಳಿಲ್ಲ. ಆದರೆ ಸಂತೋಷ್ ಅವರು ಮನೆಯಿಂದ ಹೊರಗಡೆ ಹೋಗೋದು ಡೌಟ್. ಕಿಚ್ಚ ಸುದೀಪ್, ಸ್ಪರ್ಧಿಗಳು ಸೇರಿಕೊಂಡು ಸಂತೋಷ್ ಅವರನ್ನು ಅಲ್ಲಿಯೇ ಇರಬೇಕು ಅಂತ ಮನವೊಲಿಸಬಹುದು.
ಯಾಕೆ ಇಷ್ಟ ಆಗ್ತಿಲ್ಲ?
ವರ್ತೂರು ಸಂತೋಷ್ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನುವ ಆರೋಪದಡಿ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದರು. ಅರಣ್ಯಾಧಿಕಾರಿಗಳು ಬಿಗ್ ಬಾಸ್ ಮನೆಯೊಳಗಡೆ ತೆರಳಿ ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದರು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು. ಜಾಮೀನು ಮೂಲಕ ಸಂತೋಷ್ ಹೊರಗಡೆ ಬಂದಿದ್ದರು. ಆಮೇಲೆ ಅವರು ದೊಡ್ಮನೆಯೊಳಗಡೆ ಎಂಟ್ರಿ ನೀಡಿದ್ದರು. ಯಾರು ಎಷ್ಟೇ ಧೈರ್ಯ ತುಂಬಿದ್ದರೂ ಸಂತೊಷ್ ಅವರಿಗೆ ಈಗ ಬಿಗ್ ಬಾಸ್ ಮನೆಯಲ್ಲಿ ಇರಲು ಇಷ್ಟವೇ ಇಲ್ಲ. ಮಾನಸಿಕವಾಗಿ ಸಂತೋಷ್ ಅವರಿಗೆ ಚೆನ್ನಾಗಿ ಆಟ ಆಡಲು ಆಗುತ್ತಿಲ್ಲ. ಹೀಗಾಗಿ ಅವರು ದೊಡ್ಮನೆಯಿಂದ ಹೊರಗಡೆ ಬರ್ತೀನಿ ಅಂತ ಹೇಳುತ್ತಿದ್ದಾರೆ.
ಇನ್ನು ಉಳಿದಿರುವ ನೀತು, ಸ್ನೇಹಿತ್, ವರ್ತೂರು ಸಂತೋಷ್, ಇಶಾನಿ ಅವರಲ್ಲಿ ಯಾರು ಮನೆಯಿಂದ ಹೊರಬರುತ್ತಾರೆ ಎನ್ನುವುದು ಇಂದು ರಾತ್ರಿ ಗೊತ್ತಾಗಲಿದೆ.
Big boss Varthur Santhosh says i want to leave house even after being saved with 35 lakhs votes, says i can't play because of the tiger claw pendant. Sudeep was shocked and gets out of stage.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 11:09 pm
HK News Desk
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm