ಬ್ರೇಕಿಂಗ್ ನ್ಯೂಸ್
13-11-23 08:12 pm Bangalore Correspondent ಕರ್ನಾಟಕ
ಬೆಂಗಳೂರು, ನ.13: ಐದು ರಾಜ್ಯಗಳ ಚುನಾವಣೆ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಬದಲಾವಣೆಗಳನ್ನು ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಕಾರ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳನ್ನು ಬದಲಿಸಲು ಪಕ್ಷ ಚಿಂತನೆ ನಡೆಸಿದೆ ಎಂದವರು ಹೇಳಿದ್ದಾರೆ.
ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಯುವ ನಾಯಕ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದ ಬೆನ್ನಲ್ಲೇ, ಕಾಂಗ್ರೆಸ್ ಕೂಡ ಪಕ್ಷದ ರಾಜ್ಯ ಘಟಕದ ಪುನಶ್ಚೇತನಕ್ಕೆ ಮುಂದಾಗಿದೆ. ಲೋಕಸಭೆ ಚುನಾವಣೆ ವರೆಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿತ್ತು. ಆದರೆ, ಸಿದ್ದರಾಮಯ್ಯ ಸಂಪುಟದಲ್ಲಿ ಮೂವರು ಸಚಿವರಾಗಿರುವ ಕಾರಣ ಪಕ್ಷದ ಹುದ್ದೆಯ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದು ಸತೀಶ್ ಜಾರಕಿಹೊಳಿ ಒತ್ತಾಯಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ, ಐದು ರಾಜ್ಯಗಳ ಚುನಾವಣೆ ನಂತರ ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ. ನಾವು ಈಗ ಸಚಿವರಾಗಿರುವ ಕಾರಣ ನಮ್ಮನ್ನು ಬಿಡುಗಡೆ ಮಾಡುವಂತೆ ಹೈಕಮಾಂಡ್ಗೆ ಕೇಳಿದ್ದೇವೆ. ನಾವು ಈಗಾಗಲೇ ಶಿಫಾರಸುಗಳನ್ನು ಕಳುಹಿಸಿದ್ದೇವೆ. ಐದು ರಾಜ್ಯಗಳ ಚುನಾವಣೆ ನಂತರ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಚಿವರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಎಂಎಲ್ಸಿ ಸಲೀಂ ಅಹಮದ್ ಹಾಗೂ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಲ್ಲದೆ, 20 ಜಿಲ್ಲಾಧ್ಯಕ್ಷರ ಸ್ಥಾನವನ್ನು ಲೋಕಸಭೆ ಚುನಾವಣೆಗೂ ಮುನ್ನ ಬದಲಾಯಿಸಲು ಪಕ್ಷ ಮುಂದಾಗಿದೆ.
“We are planning to field one Lingayat and one Kuruba community candidate in the coming Lok Sabha polls in Belagavi district,” Public Works Minister Satish Jarkiholi said in Belagavi on Monday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm