ಬ್ರೇಕಿಂಗ್ ನ್ಯೂಸ್
14-11-23 10:51 pm HK News Desk ಕರ್ನಾಟಕ
ಕಾರವಾರ, ನ.14: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು. ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ. ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.
ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ. ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Three persons were found dead in a house in Karwar amid Diwali celebrations. A mother and her sister committed suicide at Taragodu Bele village in Sirsi taluk.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm