ಬ್ರೇಕಿಂಗ್ ನ್ಯೂಸ್
15-11-23 05:19 pm HK News Desk ಕರ್ನಾಟಕ
ಶಿವಮೊಗ್ಗ, ನ.15: ನಿನ್ನೆ ಚಿಕ್ಕಲ್ನ ಹೊಸ ಪ್ಲೈ ಓವರ್ ಕೆಳಗೆ ನಡೆದ ಮಲ್ಲೇಶ್ ಅಲಿಯಾಸ್ ಮಲ್ಲನ ಮರ್ಡರ್ ಕೇಸ್ನಲ್ಲಿ 7 ಜನ ಭಾಗಿಯಾಗಿದ್ದು, ಇದರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲೇಶ್ (42) ನಿನ್ನೆ ತನ್ನ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎರಡು ಬೈಕ್ನಲ್ಲಿ ಬಂದ ಆರು ಜನರ ತಂಡ ಮಲ್ಲೇಶನ ಬೈಕ್ಗೆ ಡಿಕ್ಕಿ ಹೊಡೆಸಿದ್ದಾರೆ. ಇದರಿಂದ ಅವರು ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದು ಮೇಲೆ ಏಳುವಷ್ಟರಲ್ಲಿ ಅವರ ಮೇಲೆ ಬೈಕ್ನಲ್ಲಿ ಬಂದವರು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹೊಟ್ಟೆ, ಕುತ್ತಿಗೆ, ಮುಖದ ಮೇಲೆ ಮನಸ್ಸೋ ಇಚ್ಛೆ ದಾಳಿ ನಡೆಸಿದ್ದಾರೆ. ಇದರಿಂದ ಮಲ್ಲೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.
ಇದು ಅಕ್ಕನ ಸಾವಿಗೆ ತಮ್ಮನ ರಿವೇಂಜ್ ಮರ್ಡರ್ ;
ಕೊಲೆಯಾದ ಮಲ್ಲೇಶ್ ಗಾಂಧಿಬಜಾರ್ ಬಳಿಯ ತಿಗಳರ ಬೀದಿಯ ನಿವಾಸಿ. ಈತ ಕುರಿ ಕಾಳಗದಂತಹ ಕೆಲಸ ಮಾಡಿಸುತ್ತಿದ್ದ. ಕುರಿ ಕೊಳ್ಳುವ, ಮಾರಾಟ ಮಾಡುವ ಕೆಲಸ ಮಾಡುತ್ತಿದ್ದನು. ಅಲ್ಲದೇ ಒಂದು ಪ್ರಕರಣದಲ್ಲಿ ಈತನ ವಿರುದ್ದ ರೌಡಿಶೀಟ್ ಓಪನ್ ಆಗಿರುತ್ತದೆ. ಇದರಿಂದ ಹುಡುಗಿ ಮನೆಯವರು ಮದುವೆಗೆ ವಿರೋಧ ಮಾಡಿರುತ್ತಾರೆ. ಈತ ತನ್ನ ಅತ್ತೆಯ ಮಗಳನ್ನು ಪ್ರೀತಿಸುತ್ತಿದ್ದ. ಆಕೆ ಎಂಎಸ್ಸಿ ಓದಿದ್ದಳು. ಈತ ತನ್ನನ್ನೇ ಪ್ರೀತಿಸುವಂತೆ ಕಾಡುತ್ತಿದ್ದನು. ಆಕೆ ಒಳ್ಳೆಯ ಕಡೆ ಉದ್ಯೋಗ ಮಾಡಿಕೊಂಡಿದ್ದಳು. ಈತನ ಕಾಟಕ್ಕೆ ಹುಡುಗಿ ಹಾಗೂ ಆಕೆಯ ಪೋಷಕರು ಸಹ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಮಲ್ಲೇಶ್ ಪೀಡಿಸುತ್ತಿದ್ದ. ಇದರಿಂದ ಬೇಸತ್ತ ಹುಡುಗಿ ಕಳೆದ 2 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಪ್ರಕರಣದಲ್ಲಿ ಮಲ್ಲೇಶ್ ವಿರುದ್ದ 306 ಪ್ರಕರಣ ದಾಖಲಾಗಿತ್ತು. ನಂತರ ಆತ ಜಾಮೀನಿನ ಮೇಲೆ ಹೊರಗೆ ಬಂದಿದ್ದ.
ಮಲ್ಲೇಶ್ನನ್ನು ಮುಗಿಸಬೇಕೆಂದು ಹುಡುಗಿಯ ತಮ್ಮ, ಆಕೆಯ ಚಿಕ್ಕಪ್ಪ ಸಾಕಷ್ಟು ಸ್ಕೇಚ್ ಹಾಕಿದ್ದರು. ಈ ಹಿಂದೆ ಸಾಕಷ್ಟು ಸಲ ಕೊಲೆಗೆ ಯತ್ನ ಮಾಡಿದ್ದರೂ ಅದು ವಿಫಲವಾಗಿತ್ತು. ಮಲ್ಲೇಶ್ ಬೆಂಗಳೂರಿನಲ್ಲಿ ಇರುತ್ತಾನೆ. ಹಬ್ಬಕ್ಕಾಗಿ ಬಂದ ಮಲ್ಲೇಶ್ನನ್ನು ಕೊಲೆ ಮಾಡಲು ಸ್ಕೇಚ್ ಹಾಕಿರುತ್ತಾರೆ. ನಿನ್ನೆ ಮಲ್ಲೇಶನನ್ನು ಕೊಲೆ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದ್ದಾರೆ. ನಿನ್ನೆಯ ಕೊಲೆಯಲ್ಲಿ ಮಾಹಿತಿದಾರ ಸೇರಿ ಒಟ್ಟು 7 ಜನ ಭಾಗಿಯಾಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
Seven persons were involved in the murder case of Mallesh alias Mallana that took place under a new flyover in Chikkal yesterday and three persons have been arrested, Superintendent of Police Mithun Kumar said.
20-02-25 10:06 pm
Bangalore Correspondent
Kalaburagi farmers protest, crocodile: ಕಲಬುರಗ...
20-02-25 08:59 pm
Chikkamagaluru Car Murder, Body Found; ಚಿಕ್ಕಮ...
20-02-25 06:59 pm
Chikkaballapur, Muzrai scam, Revenue Inspecto...
20-02-25 04:45 pm
ಉದಯಗಿರಿ ಗಲಭೆ ಪ್ರಕರಣ ; ಪ್ರಚೋದನಕಾರಿ ಭಾಷಣ ಮಾಡಿದ್...
20-02-25 02:47 pm
19-02-25 11:00 pm
HK News Desk
ಬಾಲಕನಿದ್ದಾಗ ನುಂಗಿದ್ದ ಪೆನ್ ಕ್ಯಾಪ್ ; 21 ವರ್ಷ ಕಳ...
19-02-25 06:41 pm
Maha Kumbh river, NGT Board: ಕುಂಭಮೇಳ ನದಿ ನೀರು...
19-02-25 01:54 pm
ಇಬ್ಬರು ಹೆಂಡಿರ ಮುದ್ದಿನ ಗಂಡ ; ವಾರದ 3 ದಿನ ಅಲ್ಲಿ....
18-02-25 10:49 pm
Hindu idols Bishop House, Pala diocese, Kera...
18-02-25 10:45 pm
21-02-25 12:40 am
Giridhar Shetty, Mangaluru
Protest Mangalore, 400 KV, Catholic sabha: ಉಡ...
20-02-25 06:48 pm
Kmc Mangalore, hospital: 2 ವರ್ಷದ ಮಗುವಿನ ಗಂಟಲಲ...
19-02-25 01:56 pm
Satish Jarkiholi, Mangalore: ಕೆಪಿಸಿಸಿ ಅಧ್ಯಕ್ಷ...
18-02-25 12:36 pm
Dinesh Gundurao, Munner katipalla, Sand Mafia...
17-02-25 10:56 pm
20-02-25 01:22 pm
Mangalore Correspondent
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm
Madikeri police, Fake Scheme, Mangalore crime...
18-02-25 06:04 pm
Mangalore Crime, Surathkal, Car: ಮದುವೆ ಸಮಾರಂಭ...
18-02-25 12:11 pm