ಬ್ರೇಕಿಂಗ್ ನ್ಯೂಸ್
            
                        17-11-23 07:27 pm Bangalore Correspondent ಕರ್ನಾಟಕ
            Photo credits : Tv9 Kannada
ಬೆಂಗಳೂರು, ನ.17: ವಿರೋಧ ಪಕ್ಷದ ನಾಯಕನ ಆಯ್ಕೆಗಾಗಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಶಾಸಕಾಂಗ ಸಭೆ ನಡೆಸಲಾಗಿದೆ. ಆದರೆ, ಸಭೆಗೂ ಮೊದಲೇ ಬಿಜೆಪಿಯ ಕೆಲವು ಅತೃಪ್ತ ಶಾಸಕರು ಹೈಡ್ರಾಮಾ ನಡೆಸಿದ್ದು ಸಭೆಯನ್ನು ಬಹಿಷ್ಕರಿಸಿ ಹೊರ ನಡೆದಿದ್ದಾರೆ. ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಭೆಗೆ ಗೈರಾಗಿ ಹೊರ ನಡೆದಿದ್ದಾರೆ.
ವಿರೋಧ ಪಕ್ಷದ ನಾಯಕರನ್ನಾಗಿ ಏಳು ಬಾರಿಯ ಶಾಸಕ, ಒಕ್ಕಲಿಗ ಸಮುದಾಯದ ಆರ್. ಅಶೋಕ್ ಅವರನ್ನು ಆಯ್ಕೆ ಮಾಡುವುದು ಪಕ್ಕಾ ಆಗಿದೆ. ಆದರೆ ಘೋಷಣೆಗೂ ಮೊದಲೇ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿರುವ ಅಶೋಕ್ ಅವರನ್ನು ಫೈನಲ್ ಮಾಡುತ್ತಾರೆಂದು ವದಂತಿ ಹಬ್ಬಿತ್ತು. ಇದರ ಬೆನ್ನಲ್ಲೇ ಯತ್ನಾಳ್ ಮತ್ತು ಜಾರಕಿಹೊಳಿ ವೀಕ್ಷಕರಾಗಿ ಕೇಂದ್ರದಿಂದ ಬಂದಿದ್ದ ನಿರ್ಮಲಾ ಸೀತರಾಮನ್ ಮತ್ತು ದುಷ್ಯಂತ ಕುಮಾರ್ ಅವರೆದುರಲ್ಲೇ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ತನಗೆ ಚಹಾ ಕುಡಿಯಲಿಕ್ಕಿದೆ ಎಂದು ಮಾಧ್ಯಮಕ್ಕೆ ಹೇಳುತ್ತಾ ಯತ್ನಾಳ್ ಕಾರಿನಲ್ಲಿ ಕುಳಿತು ಹೊರಗೆ ತೆರಳಿದ್ದಾರೆ.

ಕಾಂಗ್ರೆಸ್ ಸೇರುತ್ತಾರೆ ಎಂದು ಪಕ್ಷದಿಂದ ಒಂದು ಕಾಲು ಹೊರಗೆ ಇಟ್ಟಂತಿರುವ ಎಸ್.ಟಿ ಸೋಮಶೇಖರ್ ಕೂಡ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದಾರೆ. ಸೋಮಶೇಖರ್ ದೆಹಲಿಗೆ ತೆರಳಿದ್ದಾರೆಂದು ಹೇಳಲಾಗುತ್ತಿದ್ದು ಸಭೆಗೂ ಮೊದಲೇ ಗೊಂದಲ ಏರ್ಪಟ್ಟಿದೆ. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಮಾಡಿರುವುದಕ್ಕೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಹಿರಿಯ ನಾಯಕರು ಅಸಮಾಧಾನಗೊಂಡಿದ್ದು, ಲಿಂಗಾಯತರಿಗೆ ಸ್ಥಾನ ಕೊಟ್ಟಿರುವುದರಿಂದ ಇನ್ನು ವಿರೋಧ ಪಕ್ಷ ಸ್ಥಾನವೂ ತಮಗೆ ಸಿಗದು ಎಂಬ ಭೀತಿಯಿಂದ ಯತ್ನಾಳ್, ಅರವಿಂದ ಬೆಲ್ಲದ ವಿರೋಧ ಭಾವ ತೋರಿದ್ದಾರೆ.


ಇವೆಲ್ಲದರ ನಡುವೆ, ಹೊಟೇಲ್ ಸಭಾಂಗಣದಲ್ಲಿ ಶಾಸಕಾಂಗ ಸಭೆ ನಡೆದಿದ್ದು, ವೇದಿಕೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ವಿಜಯೇಂದ್ರ, ನಿರ್ಮಲಾ ಸೀತರಾಮನ್, ದುಷ್ಯಂತ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಇದ್ದಾರೆ. ಅಲ್ಲದೆ, ವೇದಿಕೆಯ ಮುಂಭಾಗದಲ್ಲಿ ಅಶೋಕ್ ಮತ್ತು ಸುನಿಲ್ ಕುಮಾರ್ ಇದ್ದಾರೆ. ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಅಶೋಕ್, ಸುನಿಲ್ ಕುಮಾರ್ ಅಥವಾ ಅಶ್ವತ್ಥ ನಾರಾಯಣ ಇವರಲ್ಲಿ ಒಬ್ಬರ ಹೆಸರು ಫೈನಲ್ ಆಗುತ್ತೆ ಎನ್ನಲಾಗಿತ್ತು. ಆದರೆ, ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿರುವ ಅಶೋಕ್ ಹೆಸರೇ ಅಂತಿಮಗೊಂಡಿದೆ ಎನ್ನಲಾಗುತ್ತಿದೆ. ಸಭೆಯ ಕೊನೆಯಲ್ಲಿ ವೀಕ್ಷಕರಾಗಿ ಬಂದಿರುವ ನಿರ್ಮಲಾ ಸೀತರಾಮನ್, ಸಭೆಯ ತೀರ್ಮಾನವನ್ನು ಮಾಧ್ಯಮಕ್ಕೆ ತಿಳಿಸುವ ಸಾಧ್ಯತೆಯಿದೆ.

ರಮೇಶ್ ಜಾರಕಿಹೊಳಿ ಮತ್ತು ಯತ್ನಾಳ್ ಉತ್ತರ ಕರ್ನಾಟಕ ಭಾಗದವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದರು. ಆದರೆ, ಅವರಿಬ್ಬರ ಮಾತಿಗೆ ಕೇಂದ್ರ ವೀಕ್ಷಕರು ಮಣೆ ಕೊಟ್ಟಿಲ್ಲ ಎನ್ನಲಾಗುತ್ತಿದ್ದು, ಅದೇ ಕಾರಣಕ್ಕೆ ಅವರಿಬ್ಬರು ಜೊತೆಯಾಗಿಯೇ ಸಭೆಯಿಂದ ಹೊರ ನಡೆದಿದ್ದಾರೆ.
            
            
            Senior BJP MLA Basanagouda Patil Yatnal on Friday said the party should not become a part of one family, in an apparent reference to the appointment of B Y Vijayendra, son of veteran leader B S Yediyurappa, to the post of Karnataka state unit president.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm