ಬ್ರೇಕಿಂಗ್ ನ್ಯೂಸ್
17-11-23 07:27 pm Bangalore Correspondent ಕರ್ನಾಟಕ
Photo credits : Tv9 Kannada
ಬೆಂಗಳೂರು, ನ.17: ವಿರೋಧ ಪಕ್ಷದ ನಾಯಕನ ಆಯ್ಕೆಗಾಗಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಶಾಸಕಾಂಗ ಸಭೆ ನಡೆಸಲಾಗಿದೆ. ಆದರೆ, ಸಭೆಗೂ ಮೊದಲೇ ಬಿಜೆಪಿಯ ಕೆಲವು ಅತೃಪ್ತ ಶಾಸಕರು ಹೈಡ್ರಾಮಾ ನಡೆಸಿದ್ದು ಸಭೆಯನ್ನು ಬಹಿಷ್ಕರಿಸಿ ಹೊರ ನಡೆದಿದ್ದಾರೆ. ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಸಭೆಗೆ ಗೈರಾಗಿ ಹೊರ ನಡೆದಿದ್ದಾರೆ.
ವಿರೋಧ ಪಕ್ಷದ ನಾಯಕರನ್ನಾಗಿ ಏಳು ಬಾರಿಯ ಶಾಸಕ, ಒಕ್ಕಲಿಗ ಸಮುದಾಯದ ಆರ್. ಅಶೋಕ್ ಅವರನ್ನು ಆಯ್ಕೆ ಮಾಡುವುದು ಪಕ್ಕಾ ಆಗಿದೆ. ಆದರೆ ಘೋಷಣೆಗೂ ಮೊದಲೇ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿರುವ ಅಶೋಕ್ ಅವರನ್ನು ಫೈನಲ್ ಮಾಡುತ್ತಾರೆಂದು ವದಂತಿ ಹಬ್ಬಿತ್ತು. ಇದರ ಬೆನ್ನಲ್ಲೇ ಯತ್ನಾಳ್ ಮತ್ತು ಜಾರಕಿಹೊಳಿ ವೀಕ್ಷಕರಾಗಿ ಕೇಂದ್ರದಿಂದ ಬಂದಿದ್ದ ನಿರ್ಮಲಾ ಸೀತರಾಮನ್ ಮತ್ತು ದುಷ್ಯಂತ ಕುಮಾರ್ ಅವರೆದುರಲ್ಲೇ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ತನಗೆ ಚಹಾ ಕುಡಿಯಲಿಕ್ಕಿದೆ ಎಂದು ಮಾಧ್ಯಮಕ್ಕೆ ಹೇಳುತ್ತಾ ಯತ್ನಾಳ್ ಕಾರಿನಲ್ಲಿ ಕುಳಿತು ಹೊರಗೆ ತೆರಳಿದ್ದಾರೆ.
ಕಾಂಗ್ರೆಸ್ ಸೇರುತ್ತಾರೆ ಎಂದು ಪಕ್ಷದಿಂದ ಒಂದು ಕಾಲು ಹೊರಗೆ ಇಟ್ಟಂತಿರುವ ಎಸ್.ಟಿ ಸೋಮಶೇಖರ್ ಕೂಡ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿದ್ದಾರೆ. ಸೋಮಶೇಖರ್ ದೆಹಲಿಗೆ ತೆರಳಿದ್ದಾರೆಂದು ಹೇಳಲಾಗುತ್ತಿದ್ದು ಸಭೆಗೂ ಮೊದಲೇ ಗೊಂದಲ ಏರ್ಪಟ್ಟಿದೆ. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಮಾಡಿರುವುದಕ್ಕೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಹಿರಿಯ ನಾಯಕರು ಅಸಮಾಧಾನಗೊಂಡಿದ್ದು, ಲಿಂಗಾಯತರಿಗೆ ಸ್ಥಾನ ಕೊಟ್ಟಿರುವುದರಿಂದ ಇನ್ನು ವಿರೋಧ ಪಕ್ಷ ಸ್ಥಾನವೂ ತಮಗೆ ಸಿಗದು ಎಂಬ ಭೀತಿಯಿಂದ ಯತ್ನಾಳ್, ಅರವಿಂದ ಬೆಲ್ಲದ ವಿರೋಧ ಭಾವ ತೋರಿದ್ದಾರೆ.
ಇವೆಲ್ಲದರ ನಡುವೆ, ಹೊಟೇಲ್ ಸಭಾಂಗಣದಲ್ಲಿ ಶಾಸಕಾಂಗ ಸಭೆ ನಡೆದಿದ್ದು, ವೇದಿಕೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ವಿಜಯೇಂದ್ರ, ನಿರ್ಮಲಾ ಸೀತರಾಮನ್, ದುಷ್ಯಂತ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಇದ್ದಾರೆ. ಅಲ್ಲದೆ, ವೇದಿಕೆಯ ಮುಂಭಾಗದಲ್ಲಿ ಅಶೋಕ್ ಮತ್ತು ಸುನಿಲ್ ಕುಮಾರ್ ಇದ್ದಾರೆ. ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಅಶೋಕ್, ಸುನಿಲ್ ಕುಮಾರ್ ಅಥವಾ ಅಶ್ವತ್ಥ ನಾರಾಯಣ ಇವರಲ್ಲಿ ಒಬ್ಬರ ಹೆಸರು ಫೈನಲ್ ಆಗುತ್ತೆ ಎನ್ನಲಾಗಿತ್ತು. ಆದರೆ, ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿರುವ ಅಶೋಕ್ ಹೆಸರೇ ಅಂತಿಮಗೊಂಡಿದೆ ಎನ್ನಲಾಗುತ್ತಿದೆ. ಸಭೆಯ ಕೊನೆಯಲ್ಲಿ ವೀಕ್ಷಕರಾಗಿ ಬಂದಿರುವ ನಿರ್ಮಲಾ ಸೀತರಾಮನ್, ಸಭೆಯ ತೀರ್ಮಾನವನ್ನು ಮಾಧ್ಯಮಕ್ಕೆ ತಿಳಿಸುವ ಸಾಧ್ಯತೆಯಿದೆ.
ರಮೇಶ್ ಜಾರಕಿಹೊಳಿ ಮತ್ತು ಯತ್ನಾಳ್ ಉತ್ತರ ಕರ್ನಾಟಕ ಭಾಗದವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದರು. ಆದರೆ, ಅವರಿಬ್ಬರ ಮಾತಿಗೆ ಕೇಂದ್ರ ವೀಕ್ಷಕರು ಮಣೆ ಕೊಟ್ಟಿಲ್ಲ ಎನ್ನಲಾಗುತ್ತಿದ್ದು, ಅದೇ ಕಾರಣಕ್ಕೆ ಅವರಿಬ್ಬರು ಜೊತೆಯಾಗಿಯೇ ಸಭೆಯಿಂದ ಹೊರ ನಡೆದಿದ್ದಾರೆ.
Senior BJP MLA Basanagouda Patil Yatnal on Friday said the party should not become a part of one family, in an apparent reference to the appointment of B Y Vijayendra, son of veteran leader B S Yediyurappa, to the post of Karnataka state unit president.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm