ಬ್ರೇಕಿಂಗ್ ನ್ಯೂಸ್
17-11-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ನ.17: ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದರೂ ತಾನೇ ಒರಿಜಿನಲ್ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಂದು ಹೇಳಿಕೆ ನೀಡುತ್ತಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದಲೇ ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ಜನತಾದಳ (ಎಸ್) ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಹೆಸರಿನಲ್ಲಿಯೇ ಪತ್ರಿಕಾ ಹೇಳಿಕೆ ನೀಡಲಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜೊತೆಗೆ ಮೈತ್ರಿ ನಿರ್ಧಾರ ಮಾಡಲಾಗಿದೆ. ಸೆಪ್ಟಂಬರ್ 6, 10 ಮತ್ತು ಅಕ್ಟೋಬರ್ 1ರಂದು ಪಕ್ಷದ ಸಭೆಗಳಲ್ಲಿ ಈ ಬಗ್ಗೆ ಸಿಎಂ ಇಬ್ರಾಹಿಂ ಉಪಸ್ಥಿತಿಯಲ್ಲೇ ಎನ್ ಡಿಎ ಮೈತ್ರಿಕೂಟ ಸೇರುವ ಬಗ್ಗೆ ನಿರ್ಧಾರ ಮಾಡಲಾಗಿತ್ತು. ಆದರೆ ಸಭೆಯ ಬಳಿಕ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಭಿನ್ನ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅ.19ರಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಆದೇಶ ಮಾಡಲಾಗಿತ್ತು.
ಈ ನಡುವೆ, ಚಿಂತನ- ಮಂಥನ ಹೆಸರಲ್ಲಿ ಪಕ್ಷದ ಸಮಾನ ಮನಸ್ಕರ ಸಭೆಯನ್ನು ಕರೆದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ವಿರೋಧಾಭಾಸದ ಹೇಳಿಕೆಯನ್ನು ನೀಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಬೇಜವಾಬ್ದಾರಿಯುತ ಹೇಳಿಕೆಯನ್ನ ನೀಡತೊಡಗಿದ್ದರು. ಆನಂತರ, ನ.15ರಂದು ತಿರುವನಂತಪುರದಲ್ಲಿ ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ನಡೆದ ಸಭೆಯಲ್ಲಿ ಸಿಎಂ ಇಬ್ರಾಹಿಂ ಪಾಲ್ಗೊಂಡು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಈಮೂಲಕ ಪಕ್ಷದ ಶಾಸಕಾಂಗ ಸಭೆ, ಪಕ್ಷದ ರಾಜ್ಯ ಪರಿಷತ್, ಪಕ್ಷದ ಸಭೆ, ಕೋರ್ ಕಮಿಟಿಗಳಲ್ಲಿ ಒಮ್ಮತದ ನಿರ್ಣಯವಾಗಿದ್ದರೂ ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Chief Minister C.M. Shivakumar, who has been claiming that he is the state president of the original JD(S) despite being removed from the post of state president, has said that he is the state president of the party. Ibrahim has been suspended from the JD(S).
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm