ಬ್ರೇಕಿಂಗ್ ನ್ಯೂಸ್
            
                        17-11-23 07:55 pm Bangalore Correspondent ಕರ್ನಾಟಕ
            ಬೆಂಗಳೂರು, ನ.17: ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದರೂ ತಾನೇ ಒರಿಜಿನಲ್ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಂದು ಹೇಳಿಕೆ ನೀಡುತ್ತಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದಲೇ ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ಜನತಾದಳ (ಎಸ್) ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಹೆಸರಿನಲ್ಲಿಯೇ ಪತ್ರಿಕಾ ಹೇಳಿಕೆ ನೀಡಲಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜೊತೆಗೆ ಮೈತ್ರಿ ನಿರ್ಧಾರ ಮಾಡಲಾಗಿದೆ. ಸೆಪ್ಟಂಬರ್ 6, 10 ಮತ್ತು ಅಕ್ಟೋಬರ್ 1ರಂದು ಪಕ್ಷದ ಸಭೆಗಳಲ್ಲಿ ಈ ಬಗ್ಗೆ ಸಿಎಂ ಇಬ್ರಾಹಿಂ ಉಪಸ್ಥಿತಿಯಲ್ಲೇ ಎನ್ ಡಿಎ ಮೈತ್ರಿಕೂಟ ಸೇರುವ ಬಗ್ಗೆ ನಿರ್ಧಾರ ಮಾಡಲಾಗಿತ್ತು. ಆದರೆ ಸಭೆಯ ಬಳಿಕ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಭಿನ್ನ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅ.19ರಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಆದೇಶ ಮಾಡಲಾಗಿತ್ತು.
ಈ ನಡುವೆ, ಚಿಂತನ- ಮಂಥನ ಹೆಸರಲ್ಲಿ ಪಕ್ಷದ ಸಮಾನ ಮನಸ್ಕರ ಸಭೆಯನ್ನು ಕರೆದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ವಿರೋಧಾಭಾಸದ ಹೇಳಿಕೆಯನ್ನು ನೀಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಬೇಜವಾಬ್ದಾರಿಯುತ ಹೇಳಿಕೆಯನ್ನ ನೀಡತೊಡಗಿದ್ದರು. ಆನಂತರ, ನ.15ರಂದು ತಿರುವನಂತಪುರದಲ್ಲಿ ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ನಡೆದ ಸಭೆಯಲ್ಲಿ ಸಿಎಂ ಇಬ್ರಾಹಿಂ ಪಾಲ್ಗೊಂಡು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಈಮೂಲಕ ಪಕ್ಷದ ಶಾಸಕಾಂಗ ಸಭೆ, ಪಕ್ಷದ ರಾಜ್ಯ ಪರಿಷತ್, ಪಕ್ಷದ ಸಭೆ, ಕೋರ್ ಕಮಿಟಿಗಳಲ್ಲಿ ಒಮ್ಮತದ ನಿರ್ಣಯವಾಗಿದ್ದರೂ ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
            
            
            Chief Minister C.M. Shivakumar, who has been claiming that he is the state president of the original JD(S) despite being removed from the post of state president, has said that he is the state president of the party. Ibrahim has been suspended from the JD(S).
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm