ಬ್ರೇಕಿಂಗ್ ನ್ಯೂಸ್
17-11-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ನ.17: ರಾಜ್ಯಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ದರೂ ತಾನೇ ಒರಿಜಿನಲ್ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಂದು ಹೇಳಿಕೆ ನೀಡುತ್ತಿದ್ದ ಸಿ.ಎಂ. ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದಲೇ ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ಜನತಾದಳ (ಎಸ್) ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಹೆಸರಿನಲ್ಲಿಯೇ ಪತ್ರಿಕಾ ಹೇಳಿಕೆ ನೀಡಲಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜೊತೆಗೆ ಮೈತ್ರಿ ನಿರ್ಧಾರ ಮಾಡಲಾಗಿದೆ. ಸೆಪ್ಟಂಬರ್ 6, 10 ಮತ್ತು ಅಕ್ಟೋಬರ್ 1ರಂದು ಪಕ್ಷದ ಸಭೆಗಳಲ್ಲಿ ಈ ಬಗ್ಗೆ ಸಿಎಂ ಇಬ್ರಾಹಿಂ ಉಪಸ್ಥಿತಿಯಲ್ಲೇ ಎನ್ ಡಿಎ ಮೈತ್ರಿಕೂಟ ಸೇರುವ ಬಗ್ಗೆ ನಿರ್ಧಾರ ಮಾಡಲಾಗಿತ್ತು. ಆದರೆ ಸಭೆಯ ಬಳಿಕ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಭಿನ್ನ ರೀತಿಯ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅ.19ರಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿಯನ್ನು ಬರ್ಖಾಸ್ತುಗೊಳಿಸಿ ಆದೇಶ ಮಾಡಲಾಗಿತ್ತು.
ಈ ನಡುವೆ, ಚಿಂತನ- ಮಂಥನ ಹೆಸರಲ್ಲಿ ಪಕ್ಷದ ಸಮಾನ ಮನಸ್ಕರ ಸಭೆಯನ್ನು ಕರೆದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ವಿರೋಧಾಭಾಸದ ಹೇಳಿಕೆಯನ್ನು ನೀಡಿದ್ದರು. ಪಕ್ಷದ ನಾಯಕರ ವಿರುದ್ಧವೇ ಬೇಜವಾಬ್ದಾರಿಯುತ ಹೇಳಿಕೆಯನ್ನ ನೀಡತೊಡಗಿದ್ದರು. ಆನಂತರ, ನ.15ರಂದು ತಿರುವನಂತಪುರದಲ್ಲಿ ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ನಡೆದ ಸಭೆಯಲ್ಲಿ ಸಿಎಂ ಇಬ್ರಾಹಿಂ ಪಾಲ್ಗೊಂಡು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಈಮೂಲಕ ಪಕ್ಷದ ಶಾಸಕಾಂಗ ಸಭೆ, ಪಕ್ಷದ ರಾಜ್ಯ ಪರಿಷತ್, ಪಕ್ಷದ ಸಭೆ, ಕೋರ್ ಕಮಿಟಿಗಳಲ್ಲಿ ಒಮ್ಮತದ ನಿರ್ಣಯವಾಗಿದ್ದರೂ ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Chief Minister C.M. Shivakumar, who has been claiming that he is the state president of the original JD(S) despite being removed from the post of state president, has said that he is the state president of the party. Ibrahim has been suspended from the JD(S).
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am