ಬ್ರೇಕಿಂಗ್ ನ್ಯೂಸ್
20-11-23 12:45 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರದ ವೈಟ್ ಫೀಲ್ಡ್ ಬಳಿಯ ಕಾಡುಗೋಡಿ ಎಂಬಲ್ಲಿ ನಡೆದಿದೆ. 23 ವರ್ಷದ ಸೌಂದರ್ಯ ಮತ್ತು 9 ತಿಂಗಳ ಮಗು ಲಿಯಾ ಮೃತ ದುರ್ದೈವಿಗಳು.
ಭಾನುವಾರ ಬೆಳಗ್ಗೆ ಸುಮಾರು 5 ಗಂಟೆಗೆ ವೇಳೆಗೆ ಪತಿ ಸಂತೋಷ್, ಮಗು ಮತ್ತು ಪತ್ನಿ ಸೌಂದರ್ಯಾ ತಮಿಳುನಾಡಿನಿಂದ ಬೆಂಗಳೂರಿಗೆ ಬಸ್ಸಿನಲ್ಲಿ ಬಂದಿದ್ದರು. ಬಸ್ಸಿನಿಂದಿಳಿದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಮೇಲೆ ಮಗುವನ್ನು ಎತ್ತಿಕೊಂಡಿದ್ದ ಪತ್ನಿ ಸೌಂದರ್ಯ ಕಾಲಿರಿಸಿದ್ದು ಸ್ಥಳದಲ್ಲೇ ಬೆಂಕಿ ಹತ್ತಿಕೊಂಡು ದಹನವಾಗಿದ್ದಾರೆ. ಪತಿ ಸಂತೋಷ್ ಏನಾಗುತ್ತಿದೆ ಎಂದು ತಿಳಿಯದೆ ಇಬ್ಬರ ರಕ್ಷಣೆಗೆ ಮುಂದಾಗಿದ್ದು ಕೈಗೆ ಸುಟ್ಟ ಗಾಯಕ್ಕೀಡಾಗಿದ್ದಾರೆ. ಮಗುವನ್ನು ಸೆಳೆಯುವ ಪ್ರಯತ್ನ ಮಾಡಿದರೂ ಸಾಧದಯವಾ. ಪತಿಯ ಕಣ್ಮುಂದೆಯೇ ಪತ್ನಿ ಹಾಗೂ ಮಗು ಜೀವಂತ ಸುಟ್ಟು ಹೋಗಿದ್ದಾರೆ.
ಕಾಡುಗೋಡಿಯ ಎಕೆ ಗೋಪಾಲ್ ಕಾಲೋನಿ ನಿವಾಸಿಯಾಗಿರುವ ಸಂತೋಷ್ ಕುಟುಂಬ ಸಮೇತರಾಗಿ ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಿದ್ದರು. ಬೆಂಗಳೂರಿನಲ್ಲಿ ಪತ್ನಿಗೆ ಐಟಿಐ ಪರೀಕ್ಷೆ ಇದ್ದುದರಿಂದ ತುರ್ತಾಗಿ ವಾಪಸ್ ಆಗಿದ್ದರು. ಆದರೆ ಮನೆ ತಲುಪುವ ಮೊದಲೇ ಪತ್ನಿ ಮಗು ವಿದ್ಯುತ್ ತಂತಿಗೆ ಬಲಿಯಾಗಿದ್ದಾರೆ. ತಾಯಿ, ಮಗು ಸಾವಿಗೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣ ಸಂಬಂಧ ಬೆಸ್ಕಾಂ ಇಲಾಖೆಯ ಐವರು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The Bangalore Electricity Supply Company Limited (Bescom) has suspended five of its officials for negligence and issued show-cause notices to two senior officers after a mother and daughter died due to electrocution in Bengaluru.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm