ಬ್ರೇಕಿಂಗ್ ನ್ಯೂಸ್
20-11-23 04:36 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಮೊನ್ನೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಮತ್ತೆ ಅರೆಸ್ಟ್ ಆಗಿದ್ದಾರೆ. ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸ್ವಾಮೀಜಿ ವಿರುದ್ಧ 2ನೇ ಪ್ರಕರಣ ದಾಖಲಾಗಿದೆ.
ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಹೊರಡಿಸಿದ ಅರೆಸ್ಟ್ ವಾರೆಂಟ್ ಆಧರಿಸಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮುರುಘಾ ಶ್ರೀಗಳನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.
ಮಧ್ಯಾಹ್ನ ವೇಳೆಗೆ ಕೋರ್ಟ್ ವಾರೆಂಟ್ ಹೊರಬಿದ್ದ ಕೂಡಲೇ ಚಿತ್ರದುರ್ಗ ಪೊಲೀಸರು ದಾವಣಗೆರೆಗೆ ಆಗಮಿಸಿ ಶರಣರನ್ನು ಬಂಧಿಸಿ ಕರೆದೊಯ್ದಿದ್ದಾರೆ. ಚಿತ್ರದುರ್ಗ ತಲುಪುತ್ತಿದ್ದಂತೆ ಶರಣರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಈ ನಡುವೆ ಎರಡನೇ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಹೇಳಿರುವ ಶರಣರ ಪರ ವಕೀಲರು ಈ ಅಂಶವನ್ನು ಮುಂದಿಟ್ಟುಕೊಂಡು ಬಂಧನದ ಆದೇಶ ರದ್ದುಪಡಿಸುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ರಹಿತ ಅರೆಸ್ಟ್ ವಾರಂಟ್ ಹೊರಡಿಸಿತ್ತು. 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಜೈಲಿನಲ್ಲಿದ್ದು, ಆಚೆ ಬಂದಿದ್ದ ಮುರುಘಾ ಶ್ರೀಗಳನ್ನು ಮತ್ತೆ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ವಸತಿ ಶಾಲೆಯ ಬಾಲಕಿಯರಿಬ್ಬರು 2022ರ ಆಗಸ್ಟ್ 26ರಂದು ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಗೆ ತೆರಳಿ ಶರಣರ ವಿರುದ್ಧ ದೂರು ನೀಡಿದ್ದರು. ಸಂತ್ರಸ್ತ ಬಾಲಕಿಯರ ಹೇಳಿಕೆ ಪಡೆದ ಬಳಿಕ ಶರಣರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣ ಮೈಸೂರಿನಿಂದ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು. ಪ್ರಕರಣದಲ್ಲಿ ಸ್ವಾಮೀಜಿ, ವಾರ್ಡನ್, ಕಾರ್ಯದರ್ಶಿ, ವಕೀಲ, ಮಠದ ಉತ್ತರಾಧಿಕಾರಿ ಸೇರಿ ಐವರ ವಿರುದ್ಧ ಆರೋಪ ಮಾಡಲಾಗಿತ್ತು. ಮುರುಘಾ ಶರಣರನ್ನು 2022ರ ಸೆಪ್ಟೆಂಬರ್ 1ರಂದು ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು.
Shivamurthy Sharana of Muruga Mutt, who was released from jail recently, has been arrested again. The second case has been registered against swamiji for sexually assaulting minor children.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm