ಬ್ರೇಕಿಂಗ್ ನ್ಯೂಸ್
20-11-23 06:14 pm HK News Desk ಕರ್ನಾಟಕ
ವಿಜಯನಗರ, ನ.20: ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಪ್ರಿಯಕರನ ಮನೆಯಲ್ಲೇ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಟಿ ಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯ ನಿಶಾನಿ ಕ್ಯಾಂಪ್ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಪ್ರೀತಿಸುತ್ತಿದ್ದ ಯುವಕನ ಕಡೆಯವರು ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಪೋಷಕರು ದೂರಿದ್ದಾರೆ.
ನಗರದ ಟಿ.ಬಿ ಡ್ಯಾಂನ ಐಶ್ವರ್ಯ (29) ಮೃತ ಯುವತಿ. ಐಶ್ವರ್ಯ ಹಾಗೂ ಇದೇ ಪ್ರದೇಶದ ಆಶೋಕ್ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ದಲಿತ ಸಮುದಾಯದವಳಾಗಿದ್ದು, ಅಂತರ್ಜಾತಿ ಹಿನ್ನೆಲೆ ಇವರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಇತ್ತೀಚೆಗೆ ಎಲ್ಲರನ್ನೂ ಒಪ್ಪಿಸಿ ಮದುವೆಗೆ ಸಿದ್ಧರಾಗಿದ್ದರು. ಈ ನಡುವೆ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಯುವಕ ಮೇಲ್ಜಾತಿಯವನಾಗಿದ್ದು, ಇದೇ ವಿಚಾರ ಇಟ್ಟುಕೊಂಡು ಆತನ ಕಡೆಯವರು ಯುವತಿಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಐಶ್ವರ್ಯ ಹಾಗೂ ಅಶೋಕ್ ಪರಸ್ಪರ ಪ್ರೀತಿಸುತ್ತಿದ್ದು, ಆತ ಮೇಲ್ಜಾತಿಗೆ ಸೇರಿದವನಾಗಿದ್ದಾನೆ. ಆದರೂ ಕೂಡ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ನವೆಂಬರ್ 23 ರಂದು ಹೊಸಪೇಟೆಯ ಸಾಯಿಲೀಲಾ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ನಿಮ್ಮ ಹುಡುಗಿಯನ್ನು ಮದುವೆ ಮಾಡಿಕೊಂಡರೆ ನಮಗೆ ಮರ್ಯಾದೆ ಇರುವುದಿಲ್ಲ. ಹುಡುಗಿಯನ್ನು ಅಶೋಕನ ಅಜ್ಜಿ ಮನೆಗೆ ಮದುವೆಗಿಂತ ಒಂದು ವಾರ ಮುಂಚಿತವಾಗಿ ಕಳಿಸಿ ಕೊಡಬೇಕು. ಮದುವೆ ನೀವು ಯಾರೂ ಬರಬಾರದು. ಹುಡುಗಿಯ ತಂದೆ ತಂಗಿ ಮಾತ್ರ ಮದುವೆಗೆ ಬರಬೇಕು. ಸಂಬಂಧಿಕರು ಯಾರೂ ಕೂಡ ಬರುವಂತಿಲ್ಲ ಎಂದು ತಾಕೀತು ಮಾಡಿದ್ದರು. ಅದರಂತೆ ಐಶ್ವರ್ಯಳನ್ನು ಕಳೆದ ಬುಧವಾರ ಹುಡುಗನ ಮನೆಗೆ ತಂದು ಬಿಡಲಾಗಿತ್ತು. ಆದರೆ, ಮನೆಯಲ್ಲಿ ಮದುವೆ ವಿಚಾರವಾಗಿ ಅಶೋಕನ ದೊಡ್ಡಪ್ಪನ ಮಕ್ಕಳು ಜಾತಿ ವಿಚಾರ ಮುಂದಿಟ್ಟುಕೊಂಡು ಅವಮಾನಕರವಾಗಿ ಮಾತನಾಡಿದ್ದಾರೆ. ಜಾತಿ ವಿಚಾರವಾಗಿ ಹುಡುಗನ ಮನೆಯವರು ನಿಂದಿಸಿದ್ದಲ್ಲದೇ, ಮನೆಯಲ್ಲಿ ಯಾರೂ ಆಕೆಯ ಜೊತೆ ಮಾತನಾಡುತ್ತಿರಲಿಲ್ಲ ಎಂದು ಪೋಷಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Vijayapura 29 year old girl Commits suicide at her boyfriend House before three days of her marriage.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm