ಬ್ರೇಕಿಂಗ್ ನ್ಯೂಸ್
20-11-23 06:14 pm HK News Desk ಕರ್ನಾಟಕ
ವಿಜಯನಗರ, ನ.20: ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಪ್ರಿಯಕರನ ಮನೆಯಲ್ಲೇ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಟಿ ಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯ ನಿಶಾನಿ ಕ್ಯಾಂಪ್ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಪ್ರೀತಿಸುತ್ತಿದ್ದ ಯುವಕನ ಕಡೆಯವರು ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಪೋಷಕರು ದೂರಿದ್ದಾರೆ.
ನಗರದ ಟಿ.ಬಿ ಡ್ಯಾಂನ ಐಶ್ವರ್ಯ (29) ಮೃತ ಯುವತಿ. ಐಶ್ವರ್ಯ ಹಾಗೂ ಇದೇ ಪ್ರದೇಶದ ಆಶೋಕ್ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ದಲಿತ ಸಮುದಾಯದವಳಾಗಿದ್ದು, ಅಂತರ್ಜಾತಿ ಹಿನ್ನೆಲೆ ಇವರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಇತ್ತೀಚೆಗೆ ಎಲ್ಲರನ್ನೂ ಒಪ್ಪಿಸಿ ಮದುವೆಗೆ ಸಿದ್ಧರಾಗಿದ್ದರು. ಈ ನಡುವೆ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಯುವಕ ಮೇಲ್ಜಾತಿಯವನಾಗಿದ್ದು, ಇದೇ ವಿಚಾರ ಇಟ್ಟುಕೊಂಡು ಆತನ ಕಡೆಯವರು ಯುವತಿಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಐಶ್ವರ್ಯ ಹಾಗೂ ಅಶೋಕ್ ಪರಸ್ಪರ ಪ್ರೀತಿಸುತ್ತಿದ್ದು, ಆತ ಮೇಲ್ಜಾತಿಗೆ ಸೇರಿದವನಾಗಿದ್ದಾನೆ. ಆದರೂ ಕೂಡ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ನವೆಂಬರ್ 23 ರಂದು ಹೊಸಪೇಟೆಯ ಸಾಯಿಲೀಲಾ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ನಿಮ್ಮ ಹುಡುಗಿಯನ್ನು ಮದುವೆ ಮಾಡಿಕೊಂಡರೆ ನಮಗೆ ಮರ್ಯಾದೆ ಇರುವುದಿಲ್ಲ. ಹುಡುಗಿಯನ್ನು ಅಶೋಕನ ಅಜ್ಜಿ ಮನೆಗೆ ಮದುವೆಗಿಂತ ಒಂದು ವಾರ ಮುಂಚಿತವಾಗಿ ಕಳಿಸಿ ಕೊಡಬೇಕು. ಮದುವೆ ನೀವು ಯಾರೂ ಬರಬಾರದು. ಹುಡುಗಿಯ ತಂದೆ ತಂಗಿ ಮಾತ್ರ ಮದುವೆಗೆ ಬರಬೇಕು. ಸಂಬಂಧಿಕರು ಯಾರೂ ಕೂಡ ಬರುವಂತಿಲ್ಲ ಎಂದು ತಾಕೀತು ಮಾಡಿದ್ದರು. ಅದರಂತೆ ಐಶ್ವರ್ಯಳನ್ನು ಕಳೆದ ಬುಧವಾರ ಹುಡುಗನ ಮನೆಗೆ ತಂದು ಬಿಡಲಾಗಿತ್ತು. ಆದರೆ, ಮನೆಯಲ್ಲಿ ಮದುವೆ ವಿಚಾರವಾಗಿ ಅಶೋಕನ ದೊಡ್ಡಪ್ಪನ ಮಕ್ಕಳು ಜಾತಿ ವಿಚಾರ ಮುಂದಿಟ್ಟುಕೊಂಡು ಅವಮಾನಕರವಾಗಿ ಮಾತನಾಡಿದ್ದಾರೆ. ಜಾತಿ ವಿಚಾರವಾಗಿ ಹುಡುಗನ ಮನೆಯವರು ನಿಂದಿಸಿದ್ದಲ್ಲದೇ, ಮನೆಯಲ್ಲಿ ಯಾರೂ ಆಕೆಯ ಜೊತೆ ಮಾತನಾಡುತ್ತಿರಲಿಲ್ಲ ಎಂದು ಪೋಷಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Vijayapura 29 year old girl Commits suicide at her boyfriend House before three days of her marriage.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm