ಬ್ರೇಕಿಂಗ್ ನ್ಯೂಸ್
20-11-23 06:14 pm HK News Desk ಕರ್ನಾಟಕ
ವಿಜಯನಗರ, ನ.20: ಮದುವೆಗೆ ಕೇವಲ ಮೂರು ದಿನ ಇರುವಾಗಲೇ ಪ್ರಿಯಕರನ ಮನೆಯಲ್ಲೇ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಟಿ ಬಿ ಡ್ಯಾಂ ಪೊಲೀಸ್ ಠಾಣೆ ವ್ಯಾಪ್ತಿಯ ನಿಶಾನಿ ಕ್ಯಾಂಪ್ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಪ್ರೀತಿಸುತ್ತಿದ್ದ ಯುವಕನ ಕಡೆಯವರು ನಿಂದನೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಪೋಷಕರು ದೂರಿದ್ದಾರೆ.
ನಗರದ ಟಿ.ಬಿ ಡ್ಯಾಂನ ಐಶ್ವರ್ಯ (29) ಮೃತ ಯುವತಿ. ಐಶ್ವರ್ಯ ಹಾಗೂ ಇದೇ ಪ್ರದೇಶದ ಆಶೋಕ್ ಎಂಬುವರು ಪರಸ್ಪರ ಪ್ರೀತಿಸುತ್ತಿದ್ದರು. ಯುವತಿ ದಲಿತ ಸಮುದಾಯದವಳಾಗಿದ್ದು, ಅಂತರ್ಜಾತಿ ಹಿನ್ನೆಲೆ ಇವರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ, ಇತ್ತೀಚೆಗೆ ಎಲ್ಲರನ್ನೂ ಒಪ್ಪಿಸಿ ಮದುವೆಗೆ ಸಿದ್ಧರಾಗಿದ್ದರು. ಈ ನಡುವೆ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಯುವಕ ಮೇಲ್ಜಾತಿಯವನಾಗಿದ್ದು, ಇದೇ ವಿಚಾರ ಇಟ್ಟುಕೊಂಡು ಆತನ ಕಡೆಯವರು ಯುವತಿಗೆ ನಿಂದಿಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಐಶ್ವರ್ಯ ಹಾಗೂ ಅಶೋಕ್ ಪರಸ್ಪರ ಪ್ರೀತಿಸುತ್ತಿದ್ದು, ಆತ ಮೇಲ್ಜಾತಿಗೆ ಸೇರಿದವನಾಗಿದ್ದಾನೆ. ಆದರೂ ಕೂಡ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ನವೆಂಬರ್ 23 ರಂದು ಹೊಸಪೇಟೆಯ ಸಾಯಿಲೀಲಾ ಮಂಟಪದಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ನಿಮ್ಮ ಹುಡುಗಿಯನ್ನು ಮದುವೆ ಮಾಡಿಕೊಂಡರೆ ನಮಗೆ ಮರ್ಯಾದೆ ಇರುವುದಿಲ್ಲ. ಹುಡುಗಿಯನ್ನು ಅಶೋಕನ ಅಜ್ಜಿ ಮನೆಗೆ ಮದುವೆಗಿಂತ ಒಂದು ವಾರ ಮುಂಚಿತವಾಗಿ ಕಳಿಸಿ ಕೊಡಬೇಕು. ಮದುವೆ ನೀವು ಯಾರೂ ಬರಬಾರದು. ಹುಡುಗಿಯ ತಂದೆ ತಂಗಿ ಮಾತ್ರ ಮದುವೆಗೆ ಬರಬೇಕು. ಸಂಬಂಧಿಕರು ಯಾರೂ ಕೂಡ ಬರುವಂತಿಲ್ಲ ಎಂದು ತಾಕೀತು ಮಾಡಿದ್ದರು. ಅದರಂತೆ ಐಶ್ವರ್ಯಳನ್ನು ಕಳೆದ ಬುಧವಾರ ಹುಡುಗನ ಮನೆಗೆ ತಂದು ಬಿಡಲಾಗಿತ್ತು. ಆದರೆ, ಮನೆಯಲ್ಲಿ ಮದುವೆ ವಿಚಾರವಾಗಿ ಅಶೋಕನ ದೊಡ್ಡಪ್ಪನ ಮಕ್ಕಳು ಜಾತಿ ವಿಚಾರ ಮುಂದಿಟ್ಟುಕೊಂಡು ಅವಮಾನಕರವಾಗಿ ಮಾತನಾಡಿದ್ದಾರೆ. ಜಾತಿ ವಿಚಾರವಾಗಿ ಹುಡುಗನ ಮನೆಯವರು ನಿಂದಿಸಿದ್ದಲ್ಲದೇ, ಮನೆಯಲ್ಲಿ ಯಾರೂ ಆಕೆಯ ಜೊತೆ ಮಾತನಾಡುತ್ತಿರಲಿಲ್ಲ ಎಂದು ಪೋಷಕರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Vijayapura 29 year old girl Commits suicide at her boyfriend House before three days of her marriage.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm