ಬ್ರೇಕಿಂಗ್ ನ್ಯೂಸ್
20-11-23 07:00 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಕಾಂತಾರ - 2 ಚಿತ್ರ ಶೀಘ್ರದಲ್ಲೇ ಬರಲಿದೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಚಿತ್ರದ ಕತೆಯ ಬಗ್ಗೆಯೂ ಕಾಂತಾರ ಚಿತ್ರ ಕತೆಗಿಂತಲೂ ಹಿಂದಿನದ್ದು ಎಂದು ಹೇಳಿ ಕುತೂಹಲ ಹುಟ್ಟಿಸಿದ್ದರು. ಈಗ ಆ ಕತೆ ಯಾವುದು ಎನ್ನುವ ಸಣ್ಣ ಸುಳಿವು ಹೊರ ಬಿದ್ದಿದೆ.
ತುಳುನಾಡಿನ ದೈವದ ಕಥೆಯನ್ನಿಟ್ಟುಕೊಂಡು ನಿರ್ಮಿಸಿದ್ದ ಕಾಂತಾರ ಪ್ಯಾನ್ ಇಂಡಿಯಾದಲ್ಲಿ ಹಿಟ್ ಆಗಿತ್ತು. ದೊಡ್ಡ ಯಶಸ್ಸಿನ ಬಳಿಕ ಸಿನಿಮಾದ ಎರಡನೇ ಭಾಗ ಅಂದರೆ ಪ್ರೀಕ್ವೆಲ್ ನ್ನು ತೆರೆಗೆ ತರುವುದಾಗಿ ರಿಷಬ್ ಶೆಟ್ಟಿ ಇದೇ ವರ್ಷದ ಫೆಬ್ರವರಿಯಲ್ಲಿ ಸಿನಿಮಾದ 100ನೇ ದಿನದ ಸಂಭ್ರಮಾಚರಣೆ ಸಂದರ್ಭದಲ್ಲಿ ಹೇಳಿದ್ದರು. ನೀವು ನೋಡಿರುವುದು ಸಿನಿಮಾದ 2ನೇ ಭಾಗ, ಮುಂದೆ ಬರಲಿರುವುದು ಸಿನಿಮಾದ ಮೊದಲ ಭಾಗ ಎಂದು ಹೇಳಿದ್ದು ಕುತೂಹಲಕ್ಕೀಡಾಗುವಂತೆ ಮಾಡಿತ್ತು.
ಸಿನಿಮಾದ ಚಿತ್ರೀಕರಣ ಹಾಗೂ ಸ್ಕ್ರಿಪ್ಟ್ ಬಗ್ಗೆ ರಿಷಬ್ ಸಾಕಷ್ಟು ತಯಾರಿ ನಡೆಸಿದ್ದಾರೆ. ಆದರೆ ಎರಡನೇ ಭಾಗದ ಕಥೆ ಏನು ಎನ್ನುವುದರ ಬಗ್ಗೆ ಕುತೂಹಲ ಹೆಚ್ಚಿದೆ. ಕೆಲವು ಮಾಹಿತಿ ಪ್ರಕಾರ, ʼಕಾಂತಾರ-2ʼ ನಲ್ಲಿ ಪಂಜುರ್ಲಿ ದೈವದ ಮೂಲದ ಕಥೆ ಇರಲಿದೆ ಎನ್ನಲಾಗಿದೆ. ಕ್ರಿ.ಶ. 300-400ರ ಕಾಲದ ಕಥೆ ಇರಲಿದ್ದು ಪಂಜುರ್ಲಿ ದೈವದ ಹುಟ್ಟು ಹಾಗೂ ಬೆಳೆದುಬಂದ ಆಚರಣೆ ಕುರಿತ ಕಥೆ ಇರಲಿದೆ ಎನ್ನುವ ಸುಳಿವು ಸಿಕ್ಕಿದೆ.
ʼಕಾಂತಾರʼ ಚಿತ್ರದಲ್ಲಿ ತುಳುನಾಡಿನ ಆಚರಣೆ, ಸಂಪ್ರದಾಯಗಳು ಕಾಣಿಸಿಕೊಂಡಿದ್ದವು. ಸಂಪೂರ್ಣ ಚಿತ್ರೀಕರಣ ಕುಂದಾಪುರದ ರಿಷಬ್ ಶೆಟ್ಟಿ ಊರಿನಲ್ಲೇ ನಡೆದಿತ್ತು. ಚಿತ್ರಕ್ಕೆ ಸುಮಾರು 16 ಕೋಟಿ ರೂ. ಖರ್ಚು ಆಗಿತ್ತು. ʼಕಾಂತಾರ-2ʼ ಚಿತ್ರದ ಬಜೆಟ್ ಅದಕ್ಕೂ ಹೆಚ್ಚಿನದಾಗಿರಲಿದೆ. ಇದೇ ನವೆಂಬರ್ ಅಂತ್ಯಕ್ಕೆ ಉಡುಪಿಯಲ್ಲಿ ʼಕಾಂತಾರ-2ʼ ಸಿನಿಮಾದ ಮುಹೂರ್ತ ನೆರವೇರಲಿದೆ. ಮುಂದಿನ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆಯಿದೆ ಎನ್ನುವ ಮಾಹಿತಿಯಿದೆ.
After the phenomenal success of 'Kantara', Rishab Shetty and team are all set for 'Kantara 2'. The film will be a prequel to the ever-successful first part. The film will go on the floors soon.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm