ಬ್ರೇಕಿಂಗ್ ನ್ಯೂಸ್
            
                        20-11-23 07:00 pm Bangalore Correspondent ಕರ್ನಾಟಕ
            ಬೆಂಗಳೂರು, ನ.20: ಕಾಂತಾರ - 2 ಚಿತ್ರ ಶೀಘ್ರದಲ್ಲೇ ಬರಲಿದೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಚಿತ್ರದ ಕತೆಯ ಬಗ್ಗೆಯೂ ಕಾಂತಾರ ಚಿತ್ರ ಕತೆಗಿಂತಲೂ ಹಿಂದಿನದ್ದು ಎಂದು ಹೇಳಿ ಕುತೂಹಲ ಹುಟ್ಟಿಸಿದ್ದರು. ಈಗ ಆ ಕತೆ ಯಾವುದು ಎನ್ನುವ ಸಣ್ಣ ಸುಳಿವು ಹೊರ ಬಿದ್ದಿದೆ.
ತುಳುನಾಡಿನ ದೈವದ ಕಥೆಯನ್ನಿಟ್ಟುಕೊಂಡು ನಿರ್ಮಿಸಿದ್ದ ಕಾಂತಾರ ಪ್ಯಾನ್ ಇಂಡಿಯಾದಲ್ಲಿ ಹಿಟ್ ಆಗಿತ್ತು. ದೊಡ್ಡ ಯಶಸ್ಸಿನ ಬಳಿಕ ಸಿನಿಮಾದ ಎರಡನೇ ಭಾಗ ಅಂದರೆ ಪ್ರೀಕ್ವೆಲ್ ನ್ನು ತೆರೆಗೆ ತರುವುದಾಗಿ ರಿಷಬ್ ಶೆಟ್ಟಿ ಇದೇ ವರ್ಷದ ಫೆಬ್ರವರಿಯಲ್ಲಿ ಸಿನಿಮಾದ 100ನೇ ದಿನದ ಸಂಭ್ರಮಾಚರಣೆ ಸಂದರ್ಭದಲ್ಲಿ ಹೇಳಿದ್ದರು. ನೀವು ನೋಡಿರುವುದು ಸಿನಿಮಾದ 2ನೇ ಭಾಗ, ಮುಂದೆ ಬರಲಿರುವುದು ಸಿನಿಮಾದ ಮೊದಲ ಭಾಗ ಎಂದು ಹೇಳಿದ್ದು ಕುತೂಹಲಕ್ಕೀಡಾಗುವಂತೆ ಮಾಡಿತ್ತು.
ಸಿನಿಮಾದ ಚಿತ್ರೀಕರಣ ಹಾಗೂ ಸ್ಕ್ರಿಪ್ಟ್ ಬಗ್ಗೆ ರಿಷಬ್ ಸಾಕಷ್ಟು ತಯಾರಿ ನಡೆಸಿದ್ದಾರೆ. ಆದರೆ ಎರಡನೇ ಭಾಗದ ಕಥೆ ಏನು ಎನ್ನುವುದರ ಬಗ್ಗೆ ಕುತೂಹಲ ಹೆಚ್ಚಿದೆ. ಕೆಲವು ಮಾಹಿತಿ ಪ್ರಕಾರ, ʼಕಾಂತಾರ-2ʼ ನಲ್ಲಿ ಪಂಜುರ್ಲಿ ದೈವದ ಮೂಲದ ಕಥೆ ಇರಲಿದೆ ಎನ್ನಲಾಗಿದೆ. ಕ್ರಿ.ಶ. 300-400ರ ಕಾಲದ ಕಥೆ ಇರಲಿದ್ದು ಪಂಜುರ್ಲಿ ದೈವದ ಹುಟ್ಟು ಹಾಗೂ ಬೆಳೆದುಬಂದ ಆಚರಣೆ ಕುರಿತ ಕಥೆ ಇರಲಿದೆ ಎನ್ನುವ ಸುಳಿವು ಸಿಕ್ಕಿದೆ.
ʼಕಾಂತಾರʼ ಚಿತ್ರದಲ್ಲಿ ತುಳುನಾಡಿನ ಆಚರಣೆ, ಸಂಪ್ರದಾಯಗಳು ಕಾಣಿಸಿಕೊಂಡಿದ್ದವು. ಸಂಪೂರ್ಣ ಚಿತ್ರೀಕರಣ ಕುಂದಾಪುರದ ರಿಷಬ್ ಶೆಟ್ಟಿ ಊರಿನಲ್ಲೇ ನಡೆದಿತ್ತು. ಚಿತ್ರಕ್ಕೆ ಸುಮಾರು 16 ಕೋಟಿ ರೂ. ಖರ್ಚು ಆಗಿತ್ತು. ʼಕಾಂತಾರ-2ʼ ಚಿತ್ರದ ಬಜೆಟ್ ಅದಕ್ಕೂ ಹೆಚ್ಚಿನದಾಗಿರಲಿದೆ. ಇದೇ ನವೆಂಬರ್ ಅಂತ್ಯಕ್ಕೆ ಉಡುಪಿಯಲ್ಲಿ ʼಕಾಂತಾರ-2ʼ ಸಿನಿಮಾದ ಮುಹೂರ್ತ ನೆರವೇರಲಿದೆ. ಮುಂದಿನ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆಯಿದೆ ಎನ್ನುವ ಮಾಹಿತಿಯಿದೆ.
            
            
            After the phenomenal success of 'Kantara', Rishab Shetty and team are all set for 'Kantara 2'. The film will be a prequel to the ever-successful first part. The film will go on the floors soon.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm