ಬ್ರೇಕಿಂಗ್ ನ್ಯೂಸ್
20-11-23 07:00 pm Bangalore Correspondent ಕರ್ನಾಟಕ
ಬೆಂಗಳೂರು, ನ.20: ಕಾಂತಾರ - 2 ಚಿತ್ರ ಶೀಘ್ರದಲ್ಲೇ ಬರಲಿದೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಚಿತ್ರದ ಕತೆಯ ಬಗ್ಗೆಯೂ ಕಾಂತಾರ ಚಿತ್ರ ಕತೆಗಿಂತಲೂ ಹಿಂದಿನದ್ದು ಎಂದು ಹೇಳಿ ಕುತೂಹಲ ಹುಟ್ಟಿಸಿದ್ದರು. ಈಗ ಆ ಕತೆ ಯಾವುದು ಎನ್ನುವ ಸಣ್ಣ ಸುಳಿವು ಹೊರ ಬಿದ್ದಿದೆ.
ತುಳುನಾಡಿನ ದೈವದ ಕಥೆಯನ್ನಿಟ್ಟುಕೊಂಡು ನಿರ್ಮಿಸಿದ್ದ ಕಾಂತಾರ ಪ್ಯಾನ್ ಇಂಡಿಯಾದಲ್ಲಿ ಹಿಟ್ ಆಗಿತ್ತು. ದೊಡ್ಡ ಯಶಸ್ಸಿನ ಬಳಿಕ ಸಿನಿಮಾದ ಎರಡನೇ ಭಾಗ ಅಂದರೆ ಪ್ರೀಕ್ವೆಲ್ ನ್ನು ತೆರೆಗೆ ತರುವುದಾಗಿ ರಿಷಬ್ ಶೆಟ್ಟಿ ಇದೇ ವರ್ಷದ ಫೆಬ್ರವರಿಯಲ್ಲಿ ಸಿನಿಮಾದ 100ನೇ ದಿನದ ಸಂಭ್ರಮಾಚರಣೆ ಸಂದರ್ಭದಲ್ಲಿ ಹೇಳಿದ್ದರು. ನೀವು ನೋಡಿರುವುದು ಸಿನಿಮಾದ 2ನೇ ಭಾಗ, ಮುಂದೆ ಬರಲಿರುವುದು ಸಿನಿಮಾದ ಮೊದಲ ಭಾಗ ಎಂದು ಹೇಳಿದ್ದು ಕುತೂಹಲಕ್ಕೀಡಾಗುವಂತೆ ಮಾಡಿತ್ತು.
ಸಿನಿಮಾದ ಚಿತ್ರೀಕರಣ ಹಾಗೂ ಸ್ಕ್ರಿಪ್ಟ್ ಬಗ್ಗೆ ರಿಷಬ್ ಸಾಕಷ್ಟು ತಯಾರಿ ನಡೆಸಿದ್ದಾರೆ. ಆದರೆ ಎರಡನೇ ಭಾಗದ ಕಥೆ ಏನು ಎನ್ನುವುದರ ಬಗ್ಗೆ ಕುತೂಹಲ ಹೆಚ್ಚಿದೆ. ಕೆಲವು ಮಾಹಿತಿ ಪ್ರಕಾರ, ʼಕಾಂತಾರ-2ʼ ನಲ್ಲಿ ಪಂಜುರ್ಲಿ ದೈವದ ಮೂಲದ ಕಥೆ ಇರಲಿದೆ ಎನ್ನಲಾಗಿದೆ. ಕ್ರಿ.ಶ. 300-400ರ ಕಾಲದ ಕಥೆ ಇರಲಿದ್ದು ಪಂಜುರ್ಲಿ ದೈವದ ಹುಟ್ಟು ಹಾಗೂ ಬೆಳೆದುಬಂದ ಆಚರಣೆ ಕುರಿತ ಕಥೆ ಇರಲಿದೆ ಎನ್ನುವ ಸುಳಿವು ಸಿಕ್ಕಿದೆ.
ʼಕಾಂತಾರʼ ಚಿತ್ರದಲ್ಲಿ ತುಳುನಾಡಿನ ಆಚರಣೆ, ಸಂಪ್ರದಾಯಗಳು ಕಾಣಿಸಿಕೊಂಡಿದ್ದವು. ಸಂಪೂರ್ಣ ಚಿತ್ರೀಕರಣ ಕುಂದಾಪುರದ ರಿಷಬ್ ಶೆಟ್ಟಿ ಊರಿನಲ್ಲೇ ನಡೆದಿತ್ತು. ಚಿತ್ರಕ್ಕೆ ಸುಮಾರು 16 ಕೋಟಿ ರೂ. ಖರ್ಚು ಆಗಿತ್ತು. ʼಕಾಂತಾರ-2ʼ ಚಿತ್ರದ ಬಜೆಟ್ ಅದಕ್ಕೂ ಹೆಚ್ಚಿನದಾಗಿರಲಿದೆ. ಇದೇ ನವೆಂಬರ್ ಅಂತ್ಯಕ್ಕೆ ಉಡುಪಿಯಲ್ಲಿ ʼಕಾಂತಾರ-2ʼ ಸಿನಿಮಾದ ಮುಹೂರ್ತ ನೆರವೇರಲಿದೆ. ಮುಂದಿನ ವರ್ಷದ ಕೊನೆಯಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆಯಿದೆ ಎನ್ನುವ ಮಾಹಿತಿಯಿದೆ.
After the phenomenal success of 'Kantara', Rishab Shetty and team are all set for 'Kantara 2'. The film will be a prequel to the ever-successful first part. The film will go on the floors soon.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm