ಬ್ರೇಕಿಂಗ್ ನ್ಯೂಸ್
            
                        21-11-23 11:08 pm Bangalore Correspondent ಕರ್ನಾಟಕ
            ಬೆಂಗಳೂರು, ನ.21: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ. ನವೆಂಬರ್ 30ಕ್ಕೆ ನಿವೃತ್ತಿಯಾಗುತ್ತಿರುವ ವಂದಿತಾ ಶರ್ಮ ಅವರ ಜಾಗವನ್ನು ಗೋಯಲ್ ತುಂಬಲಿದ್ದಾರೆ.
2022ರ ಮೇ ತಿಂಗಳಲ್ಲಿ ವಂದಿತಾ ಶರ್ಮಾ ರಾಜ್ಯ ಸರಕಾರದ ಅತ್ಯುನ್ನತ ಅಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಈ ಸ್ಥಾನಕ್ಕೇರಿದ ನಾಲ್ಕನೇ ಮಹಿಳಾ ಅಧಿಕಾರಿ ಇವರಾಗಿದ್ದಾರೆ. 1986ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ರಜನೀಶ್ ಗೋಯಲ್ ಸದ್ಯಕ್ಕೆ ಮುಖ್ಯಮಂತ್ರಿಯವರ ಮತ್ತು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿದ್ದಾರೆ.
ಇತರೇ ಹಲವು ಹಿರಿಯ ಅಧಿಕಾರಿಗಳು ಮುಖ್ಯ ಕಾರ್ಯದರ್ಶಿ ಹುದ್ದೆಯ ಆಕಾಂಕ್ಷಿ ಲಿಸ್ಟಲ್ಲಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋಯಲ್ ಅವರನ್ನು ಆ ಸ್ಥಾನಕ್ಕೆ ನೇಮಕ ಮಾಡಿದ್ದಾರೆ. ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ವಿ. ಮಂಜುಳಾ, ಅಯಜ್ ಸೇಠ್, ಜಾವೇದ್ ಅಖ್ತರ್, ಎಲ್.ಕೆ. ಅತೀಕ್, ಉಮಾ ಮಹದೇವನ್, ಗೌರವ್ ಗುಪ್ತಾ ಆಕಾಂಕ್ಷಿ ಲಿಸ್ಟಲ್ಲಿದ್ದರು.
ಹರ್ಯಾಣ ಮೂಲದ ರಜನೀಶ್ ಗೋಯಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರೈಸಿದ್ದು ಬಳಿಕ ಸಾರ್ವಜನಿಕ ಆಡಳಿತ ವಿಷಯದಲ್ಲಿ ಪಿಎಚ್ ಡಿ ಮಾಡಿದ್ದರು. 37 ವರ್ಷಗಳ ಸೇವಾವಧಿಯಲ್ಲಿ ಅತ್ಯುತ್ತಮ ಅಧಿಕಾರಿಯಾಗಿ ಗೋಯಲ್ ಹೆಸರು ಮಾಡಿದ್ದಾರೆ. ಬಿಬಿಎಂಪಿ ಕಮಿಷನರ್, ಉನ್ನತ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಪತ್ನಿ ಶಾಲಿನಿ ರಜನೀಶ್ ಕೂಡ ರಾಜ್ಯ ಸರಕಾರದಲ್ಲಿ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.
            
            
            Rajneesh Goel, IAS officer of the 1986 batch, has been appointed as the next Chief Secretary of Karnataka. The State government on Tuesday issued an order appointing Mr. Goel, Additional Chief Secretary, Home Department, as the Chief Secretary. He will take charge from outgoing Chief Secretary Vandita Sharma, who is retiring from service on superannuation, on November 30.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm