ಬ್ರೇಕಿಂಗ್ ನ್ಯೂಸ್
23-11-23 09:38 pm Bangalore Correspondent ಕರ್ನಾಟಕ
ಬೆಂಗಳೂರು, ನ.23: ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದ ಬಿಜೆಪಿ ಹಿರಿಯ ಮುಖಂಡ ವಿ.ಸೋಮಣ್ಣ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕದಿಂದ ಮುನಿಸಿಕೊಂಡಿದ್ದರು. ಆನಂತರ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿಯೂ ಹರಿದಾಡಿತ್ತು. ಇದೀಗ ಸೋಮಣ್ಣ, ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸೋಮಣ್ಣ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿಯ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಾಗಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಯೂ ಇಲ್ಲ, ನಾನೂ ಯಾರನ್ನೂ ಸಂಪರ್ಕಿಸಿಲ್ಲ. ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸೋಮಣ್ಣ ನಡೆ ಸಂಚಲನ ಮೂಡಿಸಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಸೋಮಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರ ಬಿಟ್ಟು ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿದ್ದರು. ಅಲ್ಲದೆ, ಚಾಮರಾಜನಗರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದರು. ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣ ಸೋಲು ಕಂಡಿದ್ದರು. ಬಳಿಕ ತಮ್ಮನ್ನು ರಾಜಕೀಯವಾಗಿ ಬಲಿ ಕೊಟ್ಟರು ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ಹೇಳಿಕೊಂಡಿದ್ದರು.
Raising a banner of revolt against BJP, prominent party leader and former minister V. Somanna has announced to disclose his future plan of action after December 6. Somanna is maintaining a distance from the saffron party following his defeat in the Assembly elections earlier this year.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 01:34 pm
Mangalore Correspondent
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
17-09-25 12:25 pm
Bangalore Correspondent
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm