ಬ್ರೇಕಿಂಗ್ ನ್ಯೂಸ್
25-11-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಬೆಂಗಳೂರು ಕಂಬಳದಲ್ಲಿ ತುಳು ಅಧಿಕೃತ ಭಾಷೆಯಾಗಬೇಕೆಂಬ ಧ್ವನಿ ನಾಲ್ಕೂರುಗಳಿಗೆ ಮಾರ್ದನಿಸಿದೆ. ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತುಳು ಭಾಷಿಗರ ಬಗ್ಗೆ ಅಭಿಮಾನ ತೋರಿದ್ದಾರೆ. ತುಳು ಭಾಷೆಯನ್ನು ಹೆಚ್ಚುವರಿ ಭಾಷೆಯಾಗಿಸುವ ವಿಚಾರದಲ್ಲಿ ನಿಮ್ಮ ಭಾಗದವರೇ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿದ್ದರಲ್ವಾ.. ಯಾಕೆ ಮಾಡಿಲ್ಲ ಎಂದು ಕುಹುಕದ ಪ್ರಶ್ನೆಯೆತ್ತಿ ನಾವು ಆ ಕೆಲಸವನ್ನು ಮಾಡಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.
ಉಡುಪಿ, ಮಂಗಳೂರಿನ ಇಬ್ಬರು ಎಲ್ಲೇ ಸಿಗಲಿ ಅವರು ತುಳುವಿನಲ್ಲೇ ಮಾತಾಡುತ್ತಾರೆ. ನಡುವೆ ನಾವಿದ್ದರೆ ಅವರ ಮುಖ ನೋಡುವ ಸ್ಥಿತಿ. ಬಿ.ಆರ್ ಶೆಟ್ಟಿ ಹಿಂದೆ ದುಬೈನಲ್ಲಿದ್ದರೂ ಕರಾವಳಿಯ ಯಾರೇ ಸಿಕ್ಕಿದರೂ ಅವರಲ್ಲಿ ತುಳುವಲ್ಲೇ ಮಾತಾಡುತ್ತಿದ್ದರು ಅಂತ ವೇದಿಕೆಯಲ್ಲಿದ್ದ ಶೆಟ್ಟರ ಮುಖ ನೋಡಿ ನಕ್ಕರು. ಆ ಭಾಗದವರಿಗೆ ತುಳು ಭಾಷೆ ಅಂದ್ರೆ ಅಷ್ಟೊಂದು ಪ್ರೀತಿ. ಈ ಭಾಷೆಗೆ ಸ್ವಂತ ಲಿಪಿ ಇಲ್ಲ ತಾನೇ ಎಂದು ಕೇಳಿದಾಗ, ಸೇರಿದ್ದ ಜನರು ಇದೆ, ಇದೆ ಎಂದು ಉದ್ಘೋಷ ಹಾಕಿದರು. ತುಳು ಲಿಪಿ ಇದೆಯಾ.. ಓಕೆ.. ತುಳುವನ್ನು ಹೆಚ್ಚುವರಿ ಭಾಷೆ ಮಾಡಬೇಕೆಂದು ಅಶೋಕ್ ರೈ ವಿಧಾನಸಭೆಯಲ್ಲಿ ಮಾತಾಡಿದ್ರು. ಆಗ ಕನ್ನಡ ಮತ್ತು ಸಂಸ್ಕೃತಿ ಸಚಿವರು ಉತ್ತರ ಕೊಟ್ಟಿದ್ರು. ಹಿಂದೆ ನಿಮ್ಮ ಭಾಗದವರೇ ಈ ಖಾತೆಯ ಸಚಿವರಾಗಿದ್ದರು. ಆಗ ಸುಲಭದಲ್ಲಿ ಮಾಡಬಹುದಿತ್ತು. ಮಾಡಿಲ್ಲ ತಾನೇ..?

ನಾವು ಆ ಪ್ರಯತ್ನ ಮಾಡುತ್ತೇವೆ. ತುಳುವನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾಡುತ್ತೇವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೆಸರೆತ್ತದೆ ಕಾಲೆಳೆಯುತ್ತ ವ್ಯಂಗ್ಯವಾಡಿದರು. ಅಲ್ಲದೆ, ಕಂಬಳಕ್ಕೆ ಇಷ್ಟೊಂದು ಜನ ಸೇರುತ್ತಾರೆಂದು ಗೊತ್ತಿರಲಿಲ್ಲ. ಬೆಂಗಳೂರಿನಲ್ಲಿ ಕಂಬಳ ಮಾಡಿದ್ದಕ್ಕಾಗಿ ಅಶೋಕ್ ರೈಗೆ ಶಹಭಾಸ್ ಹೇಳುತ್ತೇನೆ. ಪ್ರತಿ ವರ್ಷ ಇಲ್ಲಿ ಕಂಬಳ ಮಾಡಬೇಕೆಂದು ಆಶಿಸುತ್ತೇನೆ, ಇದೊಂದು ದೊಡ್ಡ ಈವೆಂಟ್ ಎಂದು ಹೇಳಿ ಮೆಚ್ಚುಗೆ ಸೂಚಿಸಿದರು.



ಕಂಬಳ ಸಮಾರಂಭದಲ್ಲಿ ಕರಾವಳಿಯ ಜನಪ್ರತಿನಿಧಿಗಳು ಹೆಚ್ಚಿನವರು ತಾವೂ ತುಳುವರೆಂದು ಹೇಳಿಕೊಳ್ಳಲು ತುಳು ಭಾಷೆಯಲ್ಲೇ ಮಾತನಾಡಿದ್ರು. ಯುಟಿ ಖಾದರ್ ಸೇರಿದಂತೆ ಹಲವು ನಾಯಕರು ಸಮಾರಂಭದಲ್ಲಿ ಭಾಗವಹಿಸಿ ತುಳುವಿನಲ್ಲಿ ಮಾತಾಡಿದ್ರು. ಸಿಎಂ ಸಿದ್ದರಾಮಯ್ಯ ವೇದಿಕೆಯಲ್ಲಿದ್ದಾಗ ಕಂಬಳದ ವಿಶೇಷ ಬಗ್ಗೆ ಖಾದರ್ ಅವರೇ ಹೇಳುತ್ತಿದ್ದರು.
Bangalore Kambala, CM Siddaramaiah assures of making Tulu as official language.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm