legal control room, B Y Vijayendra, BJP: ಪೊಲೀಸ್ ಕಿರುಕುಳಕ್ಕೆ ಬಿಜೆಪಿ ಕಾರ್ಯಕರ್ತರು ಎದೆಗುಂದ ಬೇಕಿಲ್ಲ, ಕಾರ್ಯಕರ್ತರ ರಕ್ಷಣೆಗೆ 24 ಗಂಟೆ ಕಂಟ್ರೋಲ್ ರೂಂ ; ಬಿವೈ ವಿಜಯೇಂದ್ರ 

27-11-23 12:39 pm       Bangalore Correspondent   ಕರ್ನಾಟಕ

ಜಾಲತಾಣ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ತಪ್ಪಿಸಲು ಪಕ್ಷದಿಂದ ಕಂಟ್ರೋಲ್ ರೂಂ ತೆರೆಯಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. 

ಬೆಂಗಳೂರು, ನ.25: ಜಾಲತಾಣ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ತಪ್ಪಿಸಲು ಪಕ್ಷದಿಂದ ಕಂಟ್ರೋಲ್ ರೂಂ ತೆರೆಯಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. 

"ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.
ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ. 

ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ಜಾಲತಾಣದಲ್ಲಿ ವಿಜಯೇಂದ್ರ ಪ್ರಕಟಣೆ ನೀಡಿದ್ದಾರೆ.

Trouble from Police to bjp members, legal control room introduced by state president B Y Vijayendra in Bangalore.