ಬ್ರೇಕಿಂಗ್ ನ್ಯೂಸ್
28-11-23 07:28 pm Bangalore Correspondent ಕರ್ನಾಟಕ
ಬೆಂಗಳೂರು, ನ 28: ರಾಜ್ಯದ ಕಾಂಗ್ರೆಸ್ನವರು ಅಮಲಿನಲ್ಲಿದ್ದಾರೆ. ಗ್ಯಾರಂಟಿ ನೀಡಿ ನಾವು ಗೆದ್ದಿದ್ದು ಅಂತ ಭ್ರಮೆಯಲ್ಲಿದ್ದಾರೆ ಎಂದು ಸಂಸದ ಡಿ.ವಿ. ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಬಿಜೆಪಿಯವರ ಆಂತರಿಕ ಸಮಸ್ಯೆ, ಮತ್ತಿತರ ಕಾರಣಗಳಿಂದ ಕಾಂಗ್ರೆಸ್ ರಾಜ್ಯದಲ್ಲಿ ಗೆದ್ದಿದೆ ಅಷ್ಟೇ. ಗ್ಯಾರಂಟಿಗಳನ್ನು ಕೊಡುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಸಮರ್ಪಕವಾಗಿ ಜನರಿಗೆ ಪೂರೈಸುತ್ತಿಲ್ಲ ಎಂದು ಆರೋಪಿಸಿದರು.
ಕರ್ನಾಟಕ ಸರ್ಕಾರದ ಜಾಹೀರಾತುಗಳು ತೆಲಂಗಾಣದಲ್ಲಿ: ತೆಲಂಗಾಣದಲ್ಲಿ ಜಾಹೀರಾತು ಕೊಟ್ಟಿರುವ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗದ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದ ಜಾಹೀರಾತುಗಳು ಎಲ್ಲಿರಬೇಕಿತ್ತೋ ಅಲ್ಲಿ ಇಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ನವ್ರು ತಮ್ಮ ಫ್ರಿಬೀಸ್ಗಳ ಜಾಹೀರಾತು ಕೊಟ್ಟಿದ್ದಾರೆ. ಕಾಂಗ್ರೆಸ್ ರಾಜ್ಯದ ಜನರ ತೆರಿಗೆ ಹಣ ಪೋಲು ಮಾಡಿದೆ. ಹೀಗಾಗಿ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ಕೊಟ್ಟಿದೆ. ಆಯೋಗ ಖಂಡಿತ ಈ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ ಎಂದು ಡಿವಿಎಸ್ ಹೇಳಿದರು.
ಫ್ರೀ ಬೀಸ್ ಜಾಹೀರಾತು:ತೆಲಂಗಾಣದಲ್ಲಿ ಫ್ರೀ ಬೀಸ್ ಜಾಹೀರಾತು ಹಾಕಿ, ಕರ್ನಾಟಕದ ಹಣ ದುರುಪಯೋಗ ಮಾಡುತ್ತಿರುವುದು ಕಂಡುಬಂದಿದೆ. ರಾಜ್ಯದ ಖಜಾನೆ ಬರ್ಬಾದ್ ಮಾಡಲು ಹೊರಟಿದ್ದಾರೆ. ರಾಜ್ಯದ ವಿಚಾರ ಜಾಹೀರಾತು ಮಾಡಬಾರದು ಅಂತಿಲ್ಲ. ಅದಕ್ಕೆ ಕಾಲ ಸನ್ನಿವೇಶ ಇದೆ. ಕರ್ನಾಟಕ ಕುಲಗೆಡಿಸಿರುವಂತೆ, ತೆಲಂಗಾಣ ರಾಜ್ಯ ಕುಲಗೆಡಿಸಲು ಹೊರಟಿದೆ. ಕರ್ನಾಟಕದ ಹಣ ಲೂಟಿ ಮಾಡಿ ಚುನಾವಣೆ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅಲ್ಲಿ ಖರ್ಚು ಮಾಡಿದ ಹಣ ಕಾಂಗ್ರೆಸ್ ನವರಿಗೆ ಎಲ್ಲಿಂದ ಬಂತು?. ಇದರ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ಕೊಡಬೇಕಿದೆ. ಜನ ದುರುಪಯೋಗ ಮಾಡುವುದರ ವಿರುದ್ಧ ನಿಲ್ಲಬೇಕು. ಮುಂದಿನ ದಿನಗಳಲ್ಲಿ ಜನ ತೀರ್ಮಾನ ಮಾಡಬೇಕು ಎಂದರು.
D. V. Sadananda Gowda slams Congress in Bangalore over telagana elections.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm