ಬ್ರೇಕಿಂಗ್ ನ್ಯೂಸ್
28-11-23 07:28 pm Bangalore Correspondent ಕರ್ನಾಟಕ
ಬೆಂಗಳೂರು, ನ 28: ರಾಜ್ಯದ ಕಾಂಗ್ರೆಸ್ನವರು ಅಮಲಿನಲ್ಲಿದ್ದಾರೆ. ಗ್ಯಾರಂಟಿ ನೀಡಿ ನಾವು ಗೆದ್ದಿದ್ದು ಅಂತ ಭ್ರಮೆಯಲ್ಲಿದ್ದಾರೆ ಎಂದು ಸಂಸದ ಡಿ.ವಿ. ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಬಿಜೆಪಿಯವರ ಆಂತರಿಕ ಸಮಸ್ಯೆ, ಮತ್ತಿತರ ಕಾರಣಗಳಿಂದ ಕಾಂಗ್ರೆಸ್ ರಾಜ್ಯದಲ್ಲಿ ಗೆದ್ದಿದೆ ಅಷ್ಟೇ. ಗ್ಯಾರಂಟಿಗಳನ್ನು ಕೊಡುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಸಮರ್ಪಕವಾಗಿ ಜನರಿಗೆ ಪೂರೈಸುತ್ತಿಲ್ಲ ಎಂದು ಆರೋಪಿಸಿದರು.
ಕರ್ನಾಟಕ ಸರ್ಕಾರದ ಜಾಹೀರಾತುಗಳು ತೆಲಂಗಾಣದಲ್ಲಿ: ತೆಲಂಗಾಣದಲ್ಲಿ ಜಾಹೀರಾತು ಕೊಟ್ಟಿರುವ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗದ ನೋಟಿಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದ ಜಾಹೀರಾತುಗಳು ಎಲ್ಲಿರಬೇಕಿತ್ತೋ ಅಲ್ಲಿ ಇಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ನವ್ರು ತಮ್ಮ ಫ್ರಿಬೀಸ್ಗಳ ಜಾಹೀರಾತು ಕೊಟ್ಟಿದ್ದಾರೆ. ಕಾಂಗ್ರೆಸ್ ರಾಜ್ಯದ ಜನರ ತೆರಿಗೆ ಹಣ ಪೋಲು ಮಾಡಿದೆ. ಹೀಗಾಗಿ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ಕೊಟ್ಟಿದೆ. ಆಯೋಗ ಖಂಡಿತ ಈ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ ಎಂದು ಡಿವಿಎಸ್ ಹೇಳಿದರು.
ಫ್ರೀ ಬೀಸ್ ಜಾಹೀರಾತು:ತೆಲಂಗಾಣದಲ್ಲಿ ಫ್ರೀ ಬೀಸ್ ಜಾಹೀರಾತು ಹಾಕಿ, ಕರ್ನಾಟಕದ ಹಣ ದುರುಪಯೋಗ ಮಾಡುತ್ತಿರುವುದು ಕಂಡುಬಂದಿದೆ. ರಾಜ್ಯದ ಖಜಾನೆ ಬರ್ಬಾದ್ ಮಾಡಲು ಹೊರಟಿದ್ದಾರೆ. ರಾಜ್ಯದ ವಿಚಾರ ಜಾಹೀರಾತು ಮಾಡಬಾರದು ಅಂತಿಲ್ಲ. ಅದಕ್ಕೆ ಕಾಲ ಸನ್ನಿವೇಶ ಇದೆ. ಕರ್ನಾಟಕ ಕುಲಗೆಡಿಸಿರುವಂತೆ, ತೆಲಂಗಾಣ ರಾಜ್ಯ ಕುಲಗೆಡಿಸಲು ಹೊರಟಿದೆ. ಕರ್ನಾಟಕದ ಹಣ ಲೂಟಿ ಮಾಡಿ ಚುನಾವಣೆ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅಲ್ಲಿ ಖರ್ಚು ಮಾಡಿದ ಹಣ ಕಾಂಗ್ರೆಸ್ ನವರಿಗೆ ಎಲ್ಲಿಂದ ಬಂತು?. ಇದರ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ಕೊಡಬೇಕಿದೆ. ಜನ ದುರುಪಯೋಗ ಮಾಡುವುದರ ವಿರುದ್ಧ ನಿಲ್ಲಬೇಕು. ಮುಂದಿನ ದಿನಗಳಲ್ಲಿ ಜನ ತೀರ್ಮಾನ ಮಾಡಬೇಕು ಎಂದರು.
D. V. Sadananda Gowda slams Congress in Bangalore over telagana elections.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am