ಬ್ರೇಕಿಂಗ್ ನ್ಯೂಸ್
29-11-23 08:11 pm Bangalore Correspondent ಕರ್ನಾಟಕ
Photo credits : ANI news
ಬೆಂಗಳೂರು, ನ.29: ಚೈನಾ ನ್ಯುಮೋನಿಯಾ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೈನಾ ನ್ಯುಮೋನಿಯಾ ಹರಡುತ್ತಿದೆ ಎಂಬ ವರದಿಗಳ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಪ್ರಕಟಿಸಿದೆ. ಇದೇ ರೀತಿ ಕೇಂದ್ರ ಸರ್ಕಾರವೂ ಈ ಸಂಬಂಧ ಮಾರ್ಗಸೂಚಿ ಪ್ರಕಟಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ ಇದುವರೆಗೆ ಚೈನಾ ನ್ಯುಮೋನಿಯಾಗೆ ಸಂಬಂಧಿಸಿದ ವೈರಸ್ ಪತ್ತೆಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಆಸ್ಪತ್ರೆಗಳಲ್ಲೂ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಈ ಸಂಬಂಧ ಅಣಕು ಪ್ರದರ್ಶನ ನಡೆಸಿ ಎಚ್ಚರಿಕೆ ಮೂಡಿಸಬೇಕು ಎಂಬುದೂ ಸೇರಿದಂತೆ ಹಲವು ಬಗೆಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಮಾಸ್ಕ್ ಮತ್ತು ಸ್ಯಾನಿಟೈಸರ್ ಅನ್ನು ಬಳಕೆ ಮಾಡಲು ಆದ್ಯತೆ ನೀಡುವಂತೆ ಹೇಳಲಾಗಿದೆ ಎಂದರು.

ಜ್ವರ ಬಂದ ತಕ್ಷಣ ಜನ ಆಸ್ಪತ್ರೆಗಳಿಗೆ ತೆರಳಿ ವಿವಿಧ ಪರೀಕ್ಷೆಗಳಿಗೆ ಒಳಪಡಬೇಕು ಎಂದ ಅವರು, ಈ ಶೀತಜ್ವರ ಸಾಮಾನ್ಯವಾಗಿ ಐದು ದಿನಗಳವರೆಗೆ ಇರುತ್ತದೆ. ಹೀಗಾಗಿ ಯಾವ ಕಾರಣಕ್ಕೂ ಇದನ್ನು ನಿರ್ಲಕ್ಷಿಸಬಾರದು ಎಂದು ಹೇಳಿದರು. ವಯೋವೃದ್ಧರು ಮತ್ತು ಮಕ್ಕಳು ಎಚ್ಚರಿಕೆಯಿಂದ ಇರಬೇಕು. ಅದೇ ರೀತಿ ವಿವಿಧ ರೋಗಗಳಿಂದ ಬಳಲುತ್ತಿರುವವರು ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರಗಳನ್ನು ಬಳಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಆಗಾಗ ಕೈ ತೊಳೆಯುತ್ತಿರಬೇಕು ಎಂದು ಇದೇ ಸಂದರ್ಭದಲ್ಲಿ ಅವರು ಜನರಿಗೆ ಮನವಿ ಮಾಡಿಕೊಂಡರು. ಸೋಂಕಿಗೆ ಸಂಬಂಧಿಸಿದಂತೆ ನಿತ್ಯ ಅಧಿಕಾರಿಗಳು ನಿಗಾ ವಹಿಸುತ್ತಾರೆ ಮತ್ತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದ ಸಚಿವರು, ಇಷ್ಟೆಲ್ಲದರ ನಡುವೆಯೂ ಜನ ಆತಂಕಪಡುವ ಅಗತ್ಯವೇನಿಲ್ಲ. ಆದರೆ, ಸೋಂಕಿನ ಕುರಿತು ಎಚ್ಚರಿಕೆಯಿರಲಿ ಎಂದು ಸಲಹೆ ನೀಡಿದರು.
The advisory by the Karnataka government mentions the do's and don'ts to avoid any kind of infection. These include covering the mouth and nose while coughing or sneezing, frequent hand washing, avoiding unnecessary touching of the face, and using face masks in crowded places.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm