ಬ್ರೇಕಿಂಗ್ ನ್ಯೂಸ್
01-12-23 06:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.1: ಹೆಲ್ಮೆಟ್ ಹಾಕದ ಕಾರಣಕ್ಕೆ ವಕೀಲನ ಮೇಲೆ ಪೋಲಿಸರು ಠಾಣೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಚಿಕ್ಕಮಗಳೂರಿನಲ್ಲಿ ಘಟನೆ ನಡೆದಿದೆ. ಇದರ ಬೆನ್ನಲ್ಲೇ ವಕೀಲರು ಭಾರೀ ಪ್ರತಿಭಟನೆ ನಡೆಸಿದ್ದು, ಘಟನೆ ಹಿನ್ನೆಲೆಯಲ್ಲಿ ಪಿಎಸ್ ಐ 6 ಮಂದಿ ಪೊಲೀಸರನ್ನು ಎಸ್ಪಿ ಅಮಾನತು ಮಾಡಿದ್ದಾರೆ.
ವಕೀಲ ಪ್ರೀತಂ ಎಂಬವರು ಗುರುವಾರ ರಾತ್ರಿ ಹೆಲ್ಮೆಟ್ ಇಲ್ಲದೆ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಠಾಣೆಯ ಎದುರು ಅಡ್ಡಗಟ್ಟಿದ ಪೊಲೀಸರು ಬೈಕ್ನಿಂದ ಕೀ ಕಸಿದುಕೊಂಡಿದ್ದರು. ‘ಹೆಲ್ಮೆಟ್ ಹಾಕದಿರುವುದಕ್ಕೆ ದಂಡ ಕಟ್ಟುತ್ತೇನೆ, ಕೀ ಕಸಿದುಕೊಳ್ಳಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು’ ಎಂದು ಪ್ರೀತಂ ಪ್ರಶ್ನಿಸಿದ್ದಾರೆ. ಅಲ್ಲದೇ ಅದನ್ನು ವಿಡಿಯೋ ಮಾಡಿದ್ದಾರೆ.



ಇದರಿಂದ ಕೆರಳಿದ ಪೊಲೀಸರು ಪ್ರೀತಂ ಅವರನ್ನು ಠಾಣೆಯ ಒಳಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಕಂಪ್ಯೂಟರ್ ಕೊಠಡಿಯಲ್ಲಿ ಕೂಡಿ ಹಾಕಿ ದೊಣ್ಣೆ, ಲಾಠಿ, ಪೈಪ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ಪ್ರೀತಂ ತಿಳಿಸಿದ್ದಾರೆ. ಅಷ್ಟರಲ್ಲಿ ವಿಷಯ ತಿಳಿದ ಹಲವು ವಕೀಲರು ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಪ್ರೀತಂ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ನಿನ್ನೆ ರಾತ್ರಿಯಿಡೀ ಠಾಣೆಯ ಎದುರು ಧರಣಿ ನಡೆಸಿದ ವಕೀಲರು, ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಪೊಲೀಸ್ ಹಿರಿಯ ಅಧಿಕಾರಿಗಳು ವಕೀಲರನ್ನು ಸಮಾಧಾನಪಡಿಸಲು ಯತ್ನಿಸಿದರು. ಠಾಣೆಯ ಸಬ್ ಇನ್ಸ್ಪೆಕ್ಟರ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಸೇರಿ ಆರು ಪೊಲೀಸರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ. ಅಷ್ಟೂ ಜನರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಇಡೀ ಪ್ರಕರಣದಲ್ಲಿ ತನಿಖೆ ನಡೆಸಿ ವರದಿ ನೀಡಲು ಡಿವೈಎಸ್ಪಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.
Chikmagaluru lawyer beaten up over helmet issue, 6 including Police Inspector suspended.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm