ಬ್ರೇಕಿಂಗ್ ನ್ಯೂಸ್
01-12-23 06:08 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.1: ಹೆಲ್ಮೆಟ್ ಹಾಕದ ಕಾರಣಕ್ಕೆ ವಕೀಲನ ಮೇಲೆ ಪೋಲಿಸರು ಠಾಣೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಚಿಕ್ಕಮಗಳೂರಿನಲ್ಲಿ ಘಟನೆ ನಡೆದಿದೆ. ಇದರ ಬೆನ್ನಲ್ಲೇ ವಕೀಲರು ಭಾರೀ ಪ್ರತಿಭಟನೆ ನಡೆಸಿದ್ದು, ಘಟನೆ ಹಿನ್ನೆಲೆಯಲ್ಲಿ ಪಿಎಸ್ ಐ 6 ಮಂದಿ ಪೊಲೀಸರನ್ನು ಎಸ್ಪಿ ಅಮಾನತು ಮಾಡಿದ್ದಾರೆ.
ವಕೀಲ ಪ್ರೀತಂ ಎಂಬವರು ಗುರುವಾರ ರಾತ್ರಿ ಹೆಲ್ಮೆಟ್ ಇಲ್ಲದೆ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಠಾಣೆಯ ಎದುರು ಅಡ್ಡಗಟ್ಟಿದ ಪೊಲೀಸರು ಬೈಕ್ನಿಂದ ಕೀ ಕಸಿದುಕೊಂಡಿದ್ದರು. ‘ಹೆಲ್ಮೆಟ್ ಹಾಕದಿರುವುದಕ್ಕೆ ದಂಡ ಕಟ್ಟುತ್ತೇನೆ, ಕೀ ಕಸಿದುಕೊಳ್ಳಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು’ ಎಂದು ಪ್ರೀತಂ ಪ್ರಶ್ನಿಸಿದ್ದಾರೆ. ಅಲ್ಲದೇ ಅದನ್ನು ವಿಡಿಯೋ ಮಾಡಿದ್ದಾರೆ.



ಇದರಿಂದ ಕೆರಳಿದ ಪೊಲೀಸರು ಪ್ರೀತಂ ಅವರನ್ನು ಠಾಣೆಯ ಒಳಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಕಂಪ್ಯೂಟರ್ ಕೊಠಡಿಯಲ್ಲಿ ಕೂಡಿ ಹಾಕಿ ದೊಣ್ಣೆ, ಲಾಠಿ, ಪೈಪ್ನಿಂದ ಹಲ್ಲೆ ನಡೆಸಿದ್ದಾರೆ ಎಂದು ಪ್ರೀತಂ ತಿಳಿಸಿದ್ದಾರೆ. ಅಷ್ಟರಲ್ಲಿ ವಿಷಯ ತಿಳಿದ ಹಲವು ವಕೀಲರು ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಪ್ರೀತಂ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ನಿನ್ನೆ ರಾತ್ರಿಯಿಡೀ ಠಾಣೆಯ ಎದುರು ಧರಣಿ ನಡೆಸಿದ ವಕೀಲರು, ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಪೊಲೀಸ್ ಹಿರಿಯ ಅಧಿಕಾರಿಗಳು ವಕೀಲರನ್ನು ಸಮಾಧಾನಪಡಿಸಲು ಯತ್ನಿಸಿದರು. ಠಾಣೆಯ ಸಬ್ ಇನ್ಸ್ಪೆಕ್ಟರ್, ಸಹಾಯಕ ಸಬ್ ಇನ್ಸ್ಪೆಕ್ಟರ್ ಸೇರಿ ಆರು ಪೊಲೀಸರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ. ಅಷ್ಟೂ ಜನರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಇಡೀ ಪ್ರಕರಣದಲ್ಲಿ ತನಿಖೆ ನಡೆಸಿ ವರದಿ ನೀಡಲು ಡಿವೈಎಸ್ಪಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.
Chikmagaluru lawyer beaten up over helmet issue, 6 including Police Inspector suspended.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm